ETV Bharat / state

ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

author img

By

Published : Jan 19, 2022, 10:57 AM IST

Man Jump into Netravati river, Man Jump into Netravati river in Mangalore, Mangalore news, ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ, ಮಂಗಳೂರಿನಲ್ಲಿ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ, ಮಂಗಳೂರು ಸುದ್ದಿ,
ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ನೇತ್ರಾವತಿ ಸೇತುವೆ ಮೇಲೆ ಬೈಕ್ ನಿಲ್ಲಿಸಿದ ವ್ಯಕ್ತಿಯೊಬ್ಬ ನೇರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.

ಬಂಟ್ವಾಳ: ಬೈಕ್, ಚಪ್ಪಲಿ, ಮೊಬೈಲ್ ಅನ್ನು ನೇತ್ರಾವತಿ ಸೇತುವೆ ಮೇಲೆ ಇಟ್ಟು ವ್ಯಕ್ತಿಯೊಬ್ಬ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ನಗರದಲ್ಲಿ ನಡೆದಿದೆ.

ಸ್ಥಳೀಯ ಕಾರಾಜೆ ನಿವಾಸಿ ಜಲೀಲ್ ( 55) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು 11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಲ್ಲಿ ಬೈಕ್, ಚಪ್ಪಲಿ ಹಾಗೂ ಮೊಬೈಲ್ ಕಂಡಿದೆ. ಆದರೆ ಈ ವಸ್ತುಗಳ ಬಳಿ ಯಾರು ಇಲ್ಲವೆಂದು ತಿಳಿದ ಸ್ಥಳೀಯ ಈಜುಗಾರರು ನದಿಯಲ್ಲಿ ಹುಡುಕಲು ಆರಂಭಿಸಿದರು.

ಸ್ಥಳದಲ್ಲಿದ್ದ ಮೊಬೈಲ್ ಬಗ್ಗೆ ಮಾಹಿತಿ ಪಡೆದು ವಿಚಾರಿಸಿದಾಗ ಕಾರಾಜೆ ನಿವಾಸಿ ಜಲೀಲ್ ಎಂದು ಗುರುತು ಪತ್ತೆಯಾಗಿತ್ತು. ಆದರೆ, ತಡ ರಾತ್ರಿವರೆಗೂ ಹುಡುಕಿದಾಗ ವ್ಯಕ್ತಿಯ ಮೃತ ದೇಹ ಪತ್ತೆಯಾಗಿರಲಿಲ್ಲ. ಗುರುವಾರ ಮುಂಜಾನೆಯಿಂದ ಸ್ಥಳೀಯ ಈಜುಗಾರ ಸತ್ತಾರ್ ಹಾಗೂ ಮೊಹಮ್ಮದ್ ನದಿಯಲ್ಲಿ ಶೋಧ ಕಾರ್ಯ ಮುಂದುವರಿಸಿದ್ದಾಗ ಜಲೀಲ್​ ಶವ ಪತ್ತೆಯಾಗಿದೆ.

ಈ ಘಟನೆ ಕುರಿತು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನು ಓದಿ:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.