ಮಂಗಳೂರು: ನಗರದ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆರೋಪಿಯನ್ನು ತಡರಾತ್ರಿ 2 ಗಂಟೆಯವರೆಗೂ ಮಂಗಳೂರು ಆಯುಕ್ತ ಡಾ.ಪಿ.ಎಸ್.ಹರ್ಷ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
![Aditya to appear in court today](https://etvbharatimages.akamaized.net/etvbharat/prod-images/5807835_thummanag.jpg)
ಈ ಸಂದರ್ಭ ಆರೋಪಿ ಘಟನೆಯ ಬಗ್ಗೆ ಪಶ್ಚಾತ್ತಾಪ ವ್ಯಕ್ತಪಡಿಸಿದ್ದು, ತಪ್ಪಾಯ್ತು ಎಂದು ಹೇಳುತ್ತಿದ್ದ ಎಂಬ ಮಾಹಿತಿ ದೊರೆತಿದೆ.
ಆರೋಪಿಯನ್ನು ಮಂಗಳೂರು ಕಮಿಷನರ್ ನೇತೃತ್ವದ ಆರು ಜನ ಅಧಿಕಾರಿಗಳ ತಂಡ ಪಣಂಬೂರಿನ ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯ ಮೊದಲನೆೇ ಮಹಡಿಯಲ್ಲಿ ವಿಚಾರಣೆ ನಡೆಸಿದೆ. ಬಳಿಕ ಆತನಿಗೆ ಅಲ್ಲೇ ಮಲಗಲು ವ್ಯವಸ್ಥೆ ಮಾಡಲಾಗಿದೆ. ಈ ಸಂದರ್ಭ ಆತನ ಮೇಲೆ ತೀವ್ರ ನಿಗಾ ಇರಿಸಲಾಗಿದ್ದು, ಇಬ್ಬರು ಪಿಎಸ್ಐ, 10 ಪಿಸಿಗಳ ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.
ಇಂದು ಮಧ್ಯಾಹ್ನ ಕೋರ್ಟ್ಗೆ ಹಾಜರು:
ಮಧ್ಯಾಹ್ನದ ಹೊತ್ತಿಗೆ ಪೊಲೀಸರು ಆರೋಪಿಯನ್ನು 6ನೇ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.