ಮಂಗಳೂರು: ಮಂಗಳೂರು ಬಾಂಬ್ ಪ್ರಕರಣ ಕುರಿತು ಮಾಜಿ ಸಿಎಂ ಹೆಚ್ಡಿಕೆ ನೀಡಿರುವ ಹೇಳಿಕೆಗೆ ಹಾವೇರಿ ಜಿಲ್ಲೆ ಹಿರೇಕೆರೂರು ಶಾಸಕ ಬಿ. ಸಿ. ಪಾಟೀಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
![Mangaluru bomb case: BC Patil outraged on HDK](https://etvbharatimages.akamaized.net/etvbharat/prod-images/kn-hvr-bcp-twitter-7202143_22012020121351_2201f_1579675431_22.jpg)
ಹೆಚ್. ಡಿ ಕುಮಾರಸ್ವಾಮಿ ಹೇಳಿಕೆ ಕುರಿತಂತೆ ಕೌರವ ತಮ್ಮ ಟ್ವಿಟರ್ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಹೇಳಿಕೆ ಕೊಡುವುದಕ್ಕೂ ಮೊದಲು ನೂರು ಸಾರಿ ಯೋಚನೆ ಮಾಡಬೇಕು.
ಮಾಜಿ ಸಿಎಂ ಆದ ನೀವು ಪೊಲೀಸ್ ಇಲಾಖೆಯನ್ನ ಪದೇ ಪದೇ ಹೀಯಾಳಿಸುವುದು ಸರಿಯಲ್ಲ. ಇಂತಹ ಅವಿವೇಕಿತನದ ಹೇಳಿಕೆ ನೀಡುವುದು ನಿಮಗೆ ಶೋಭೆ ತರುವುದಿಲ್ಲ ಎಂದು ಪಾಟೀಲ್ ಟ್ವೀಟ್ ಮಾಡಿದ್ದಾರೆ.