ETV Bharat / state

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಎನ್​ಐಎಗೆ ಹಸ್ತಾಂತರ, ದಾಖಲೆ ಪಡೆದ ಅಧಿಕಾರಿಗಳು

author img

By

Published : Dec 1, 2022, 9:50 AM IST

Updated : Dec 1, 2022, 1:27 PM IST

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಅಧಿಕೃತವಾಗಿ ವಹಿಸಲಾಗಿದೆ. ಎನ್​ಐಎ ಅಧಿಕಾರಿಗಳು ಪೊಲೀಸ್ ‌ಕಮಿಷನರ್ ಕಚೇರಿಗೆ ತೆರಳಿ ಪ್ರಕರಣ ಸಂಬಂಧ ನಡೆದ ತನಿಖೆಗಳ ಮಾಹಿತಿ ಪಡೆದಿದ್ದಾರೆ.

mangaluru-cooker-bomb-blast-case-officially-handover-to-nia
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ರಾಷ್ಟ್ರೀಯ ತನಿಖಾ ದಳ (ಎನ್​​ಐಎ)ಕ್ಕೆ ಹಸ್ತಾಂತರಿಸಿದ್ದಾರೆ. ನವೆಂಬರ್ 19ರಂದು ಮಂಗಳೂರಿನ ಗರೋಡಿಯಲ್ಲಿ ಶಂಕಿತ ಉಗ್ರ ಶಾರೀಕ್ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಕೊಂಡೊಯ್ಯುತ್ತಿದ್ದಾಗ ಸ್ಫೋಟಗೊಂಡಿತ್ತು. ಪ್ರಕರಣ ನಡೆದ ಮರುದಿನದಿಂದಲೇ ಎನ್​​ಐಎ ಅಧಿಕಾರಿಗಳು ಪೊಲೀಸರ ಜೊತೆಗೆ ವಿಚಾರಣೆ ನಡೆಸುತ್ತಿದ್ದರು.

ಈ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯದ ಮೂಲಕ ಮಂಗಳೂರು ಪೊಲೀಸರಿಂದ ಎನ್​​ಐಎ ಪಡೆದುಕೊಂಡಿದೆ. ಇದೀಗ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳಿಗೆ ಪ್ರಕರಣದ ವಿಚಾರಣೆಯನ್ನು ನಗರ ಪೊಲೀಸ್ ಆಯುಕ್ತರು ಅಧಿಕೃತವಾಗಿ ಹಸ್ತಾಂತರಿಸಿದ್ದಾರೆ.

cooker-bomb-blast-case
ಸ್ಫೋಟ ಸಂಭವಿಸಿದ್ದ ಆಟೋ

ಈಗಾಗಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಗ್ರ ಶಾರೀಕ್ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಆತನ ಆರೋಗ್ಯ ಸುಧಾರಣೆಯಾಗುತ್ತಿದ್ದು, ಖುದ್ದು ಪೊಲೀಸ್ ಕಮೀಷನರ್ ನೇತೃತ್ವದಲ್ಲಿ ಹೇಳಿಕೆಯನ್ನು ದಾಖಲಿಸಲಾಗಿದೆ. ಪ್ರಕರಣದ ತನಿಖಾಧಿಕಾರಿ ಪಿ.ಎ ಹೆಗ್ಡೆ ಎದುರು ಹೇಳಿಕೆ ನೀಡಲಾಗಿದೆ. ಇಂದಿನಿಂದ ಎನ್​ಐಎ ಅಧಿಕಾರಿಗಳು ಆರೋಪಿಯ ಹೇಳಿಕೆ ಪಡೆಯಲಿದ್ದಾರೆ.

ಪೊಲೀಸರಿಂದ ದಾಖಲೆ ಪಡೆದ ಎನ್​ಐಎ: ಮಂಗಳೂರು ಪೊಲೀಸ್ ‌ಕಮಿಷನರ್ ಕಚೇರಿಗೆ ಬಂದ ಎನ್​ಐಎ ಅಧಿಕಾರಿಗಳು ಪ್ರಕರಣ ಸಂಬಂಧ ನಡೆದ ತನಿಖೆಗಳ ಮಾಹಿತಿ ಪಡೆದಿದ್ದಾರೆ. ಮೂರು ಮಂದಿ ಅಧಿಕಾರಿಗಳು ಆಗಮಿಸಿ ದಾಖಲೆ ಪಡೆದು, ಆಯುಕ್ತ ಶಶಿಕುಮಾರ್ ಅವರಲ್ಲಿ ಚರ್ಚಿಸಿ ತೆರಳಿದ್ದಾರೆ.

ಇದನ್ನೂ ಓದಿ: ಮಂಗಳೂರು ಕುಕ್ಕರ್​ ಬಾಂಬ್​ ಸ್ಫೋಟ: ತಮಿಳುನಾಡಿನಲ್ಲಿ ಶಾರಿಕ್​ ಹೆಜ್ಜೆ ಗುರುತು ಶೋಧ

Last Updated : Dec 1, 2022, 1:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.