ETV Bharat / state

ಪ್ರಧಾನಿ ಮೋದಿ ಆರೋಗ್ಯ ವೃದ್ದಿಗಾಗಿ ದಕ್ಷಿಣ ಕನ್ನಡದ ದೇವಾಲಯಗಳಲ್ಲಿ ಮೃತ್ಯುಂಜಯ ಹೋಮ

author img

By

Published : Jan 11, 2022, 1:49 AM IST

Updated : Jan 11, 2022, 7:15 AM IST

Mrithyunjaya homa for pm modi health in dakshina kannada temples
ಪ್ರಧಾನಿ ಮೋದಿ ಆರೋಗ್ಯ ವೃದ್ದಿಗಾಗಿ ದಕ್ಷಿಣ ಕನ್ನಡದ ದೇವಾಲಯಗಳಲ್ಲಿ ಮೃತ್ಯುಂಜಯ ಹೋಮ

ಪ್ರಧಾನಿ‌ ನರೇಂದ್ರ ಮೋದಿಯವರ ಆರೋಗ್ಯ ವೃದ್ದಿ‌ ಹಾಗೂ ದೀರ್ಘಾಯುಷ್ಯಕ್ಕಾಗಿ ದಕ್ಷಿಣ ಕನ್ನಡದ ದೇವಾಲಯಗಳಲ್ಲಿ ಮೃತ್ಯುಂಜಯ ಹೋಮದ ಜೊತೆಗೆ ಪ್ರಾರ್ಥನೆ ಸಲ್ಲಿಸಲಾಯಿತು.

ಬೆಳ್ತಂಗಡಿ, ದಕ್ಷಿಣ ಕನ್ನಡ : ದೇಶದ ಪ್ರಧಾನಿ ನರೇಂದ್ರ ಮೋದಿಯವರ ಆರೋಗ್ಯ ವೃದ್ಧಿ ಮತ್ತು ದೀರ್ಘಾಯುಷ್ಯ ಪ್ರಾಪ್ತಿಗಾಗಿ ತಾಲೂಕಿನ‌ ಜನತೆಯ ಪರವಾಗಿ ಶಾಸಕ ಹರೀಶ್ ಪೂಂಜಾ ಅವರ ನೇತೃತ್ವದಲ್ಲಿ ತಾಲೂಕಿನ ಸುಮಾರು 25 ಶಿವ ದೇವಾಲಯದಲ್ಲಿ ಮೃತ್ಯುಂಜಯ ಹೋಮ ನಡೆಯಿತು.

ಪ್ರಧಾನಿ‌ ನರೇಂದ್ರ ಮೋದಿಯವರ ಆರೋಗ್ಯ ವೃದ್ದಿ‌ ಹಾಗೂ ದೀರ್ಘಾಯುಷ್ಯಕ್ಕಾಗಿ ಮೃತ್ಯುಂಜಯ ಹೋಮದ ಜೊತೆಗೆ ಪ್ರಾರ್ಥನೆ ಸಲ್ಲಿಸಲಾಯಿತು.‌ ತಾಲೂಕಿನ ಪ್ರಮುಖ ಶಿವ ದೇವಾಲಯಗಳಲ್ಲಿ ಆಯಾ ದೇವಾಲಯಗಳ ಆಡಳಿತ ಮಂಡಳಿಗಳು, ಗಣ್ಯರ ನೇತೃತ್ವದಲ್ಲಿ ಹೋಮ ನಡೆಸಲಾಯಿತು.

ಹೋಮ ನಡೆದ ದೇವಾಲಯಗಳು: ಕುತ್ಯಾರು ಸೋಮನಾಥೇಶ್ವರ, ವೇಣೂರು‌ ಮಹಾಲಿಂಗೇಶ್ವರ, ಮರೋಡಿ ಉಮಾಮಹೇಶ್ವರ, ಕಾಶಿಪಟ್ಣ ಪಂಚಲಿಂಗೇಶ್ವರ, ಗರ್ಡಾಡಿ ನಂದಿಕೇಶ್ವರ, ಶಿರ್ಲಾಲು ಮಹಾಲಿಂಗೇಶ್ವರ, ಮಲ್ಲಿಪ್ಪಾಡಿ ಸದಾಶಿವೇಶ್ವರ, ಓಡಿಲು ಮಹಾಲಿಂಗೇಶ್ವರ, ಅಳದಂಗಡಿ ಸೋಮನಾಥೇಶ್ವರಿ, ನಾವರ ಮಹಾಲಿಂಗೇಶ್ವರ, ಕೇಳ್ಕರ ಮಹಾಲಿಂಗೇಶ್ವರ, ಸುರ್ಯ ಸದಾಶಿವೇಶ್ವರ, ನಿಡಿಗಲ್ ಲೋಕನಾಥೇಶ್ವರ, ಇಂದಬೆಟ್ಟು ಅರ್ಧನಾರೀಶ್ವರ, ಕೂಡಬೆಟ್ಟು ಸದಾಶಿವೇಶ್ವರ, ಕಳೆಂಜ ಸದಾಶಿವೇಶ್ವರ, ರುದ್ರಗಿರಿ ಮೃತ್ಯುಂಜಯ, ಕೋರಿಂಜ ಪಂಚಲಿಂಗೇಶ್ವರ, ಕರಾಯ ಮಹಾಲಿಂಗೇಶ್ವರ, ಕುರಾಯ ಸದಾಶಿವೇಶ್ವರ, ಮಲೆಂಗಲ್ಲು ಉಮಾ ಮಹೇಶ್ವರ, ಪಜಿರಡ್ಕ ಸದಾಶಿವೇಶ್ವರ, ಬಯಲು, ಅಪ್ಪಿಲ ಉಮಾಮಹೇಶ್ವರ, ಚಾರ್ಮಾಡಿ ಪಂಚಲಿಂಗೇಶ್ವರ ದೇವಾಲಯ.

ಇದನ್ನೂ ಓದಿ: ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕರ ಆಕ್ರೋಶ

Last Updated :Jan 11, 2022, 7:15 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.