ಮಂಗಳೂರಿನಲ್ಲಿ ಎನ್​ಐಎ ಪರಿಶೀಲನೆ ಮುಕ್ತಾಯ: ಮೂವರು ಪಿಎಫ್ಐ ಮುಖಂಡರು ವಶಕ್ಕೆ

author img

By

Published : Sep 22, 2022, 11:07 AM IST

Updated : Sep 22, 2022, 11:48 AM IST

ಮಂಗಳೂರಿನಲ್ಲಿ ಎನ್​ಐಎ ಪರಿಶೀಲನೆ ಮುಕ್ತಾಯ

ಮಂಗಳೂರಿನ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಎಸ್​ಡಿಪಿಐ ಕಚೇರಿ ಹಾಗೂ ಕೆಲ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿದ ಎನ್‌ಐಎ ಅಧಿಕಾರಿಗಳ ಪರಿಶೀಲನೆ ಮುಕ್ತಾಯಗೊಂಡಿದ್ದು, ಮೂವರು ಪಿಎಫ್ಐ ನಾಯಕರನ್ನು ವಶಕ್ಕೆ ಪಡೆಯಲಾಗಿದೆ.

ಮಂಗಳೂರು: ಇಂದು ಮುಂಜಾನೆ ಮಂಗಳೂರಿನ ಎಸ್​ಡಿಪಿಐ, ಪಿಎಫ್ಐ ಕಚೇರಿ ಮೇಲೆ ದಾಳಿ ನಡೆಸಿದ (ರಾಷ್ಟ್ರೀಯ ತನಿಖಾ ಸಂಸ್ಥೆ) ಎನ್​ಐಎ ಅಧಿಕಾರಿಗಳ ಪರಿಶೀಲನೆ ಮುಕ್ತಾಯಗೊಂಡಿದ್ದು, ಮೂವರು ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆ ಮುಂದುವರೆಸಲಾಗಿದೆ.

ಪಿಎಫ್ಐ ಮುಖಂಡರಾದ ಅಶ್ರಫ್ ಎ.ಕೆ, ಮೊಹಿದ್ದೀನ್ ಹಳೆಯಂಗಡಿ, ನವಾಜ್ ಕಾವೂರು ಎಂಬವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಎಸ್​ಡಿಪಿಐ ಮುಖಂಡ ಅಥಾವುಲ್ಲ ಜೋಕಟ್ಟೆ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಎನ್​ಐಎ ಪರಿಶೀಲನೆ ಮುಕ್ತಾಯ

ಇದನ್ನೂ ಓದಿ: ಮಂಗಳೂರಿನಲ್ಲಿ ಪಿಎಫ್ಐ, ಎಸ್​ಡಿಪಿಐ ಕಚೇರಿಗಳ ಮೇಲೆ ಎನ್​ಐಎ ದಾಳಿ: ಹಲವು ಪ್ರತಿಭಟನಾಕಾರರು ವಶಕ್ಕೆ

ಮುಂಜಾನೆ 3.30 ರ ಸುಮಾರಿಗೆ ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್​ಡಿಪಿಐ, ಪಿಎಫ್ಐ ಜಿಲ್ಲಾ ಕಚೇರಿ ಮೇಲೆ ದಾಳಿ ನಡೆಸಿದ ಎನ್​ಐಎ ಅಧಿಕಾರಿಗಳು, ಸುಮಾರು 5 ಗಂಟೆಗಳ ಕಾಲ ಪರಿಶೀಲನೆ ನಡೆಸಿದರು.‌ ದಾಳಿ ಕುರಿತು ಮಾಹಿತಿ ಪಡೆದ ಎಸ್​ಡಿಪಿಐ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಮುಂಜಾನೆ 5 ಗಂಟೆಗೆ ಕಚೇರಿಗೆ ಆಗಮಿಸಿದ್ದರು.

SDPI Office SDPI Office
ಮಂಗಳೂರಿನ ಎಸ್​ಡಿಪಿಐ ಕಚೇರಿ

ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ ಬಳಿಕ ಲ್ಯಾಪ್ ಟಾಪ್, ದಾಖಲೆ ಪತ್ರ ಮತ್ತು ಕಾರ್ಯಕ್ರಮದ ಫೋಟೋಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಎಸ್​ಡಿಪಿಐ ಮತ್ತು ಪಿಎಫ್​ಐಗೆ ಸೇರಿದ ಕೆಲವು ಮುಖಂಡರ ಮನೆ ಮೇಲೂ ಸಹ ದಾಳಿ ನಡೆಸಲಾಗಿದೆ.

ಇದನ್ನೂ ಓದಿ: ದೇಶಾದ್ಯಂತ ಮಧ್ಯರಾತ್ರಿಯಿಂದಲೇ PFI ಕಚೇರಿಗಳ ಮೇಲೆ ಎನ್​ಐಎ, ಇಡಿ ದಿಢೀರ್‌ ದಾಳಿ

ದಾಳಿ ಬಳಿಕ ಮಾತನಾಡಿದ ಎಸ್​ಡಿಪಿಐ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ, ಎನ್​ಐಎ ಅವರು ಬಂದಿರುವುದು ಪಿಎಫ್ಐ ಕಚೇರಿ ಮೇಲೆ ದಾಳಿ ಮಾಡಲು. ಅವರ ಎಫ್​ಐಆರ್​ನಲ್ಲಿ ಕೂಡ ಪಿಎಫ್​ಐ ಅಂತ ಇತ್ತು. ಎಸ್​ಡಿಪಿಐ ಕಚೇರಿಗೆ ಬಂದ ಬಳಿಕ ಇದು ಪಿಎಫ್​ಐ ಕಚೇರಿ ಅಲ್ಲ, ಎಸ್​ಡಿಪಿಐ ಕಚೇರಿ ಎಂದು ಗೊತ್ತಾಗಿದೆ. ಬಳಿಕ ಪಿಎಫ್ಐ ಜೊತೆಗೆ ಎಸ್​ಡಿಪಿಐ ಕಚೇರಿ ಪರಿಶೀಲನೆ ಸಹ ನಡೆಸಿದ್ದಾರೆ. ನಮ್ಮ ಕಚೇರಿಯ ಲ್ಯಾಪ್ ಟಾಪ್, ಬಾಡಿಗೆ ಕರಾರು ಪತ್ರ, ಕಾರ್ಯಕ್ರಮದ ಫೋಟೋಗಳನ್ನು ಕೊಂಡೊಯ್ದಿದ್ದಾರೆ ಎಂದರು.

ಇದನ್ನೂ ಓದಿ: ದೇಶಾದ್ಯಂತ ಎನ್‌ಐಎ ದಾಳಿ: 100ಕ್ಕೂ ಹೆಚ್ಚು ಪಿಎಫ್‌ಐ ಕಾರ್ಯಕರ್ತರ ಬಂಧನ

ಇನ್ನು ಎಸ್​ಡಿಪಿಐ ನಾಯಕರ ಮನೆ ಮೇಲೆ ದಾಳಿಯಾಗಿಲ್ಲ. ನಮ್ಮ ಕಚೇರಿಯ ಬೋರ್ಡ್, ಸ್ಟ್ಯಾಂಡ್​ಗಳನ್ನು ಪರಿಶೀಲಿಸಿದ್ದಾರೆ. ಯಾವ ಕಾರಣಕ್ಕಾಗಿ ಎನ್​ಐಎ ದಾಳಿ ಮಾಡಲಾಗಿದೆ ಎಂದು ಹೇಳುತ್ತಿಲ್ಲ. ಇದು ಬಿಜೆಪಿ ಸರ್ಕಾರದ ಕುತಂತ್ರ. ನಾವು ರಾಜಕೀಯವಾಗಿ ವೇಗವಾಗಿ ಬೆಳೆಯುತ್ತಿರುವುದನ್ನು ಸಹಿಸಲಾಗದೇ ಹೀಗೆ ಮಾಡಿದ್ದಾರೆ ಎಂದು ಹೇಳಿದರು.

Last Updated :Sep 22, 2022, 11:48 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.