ETV Bharat / state

ಫ್ಲೆಕ್ಸ್ ಬ್ಯಾನರ್ ಅಳವಡಿಸುವಾಗ ವಿದ್ಯುತ್ ಶಾಕ್: ಬೆಳ್ತಂಗಡಿಯಲ್ಲಿ ಓರ್ವ ಸಾವು, ಮತ್ತೋರ್ವ ಗಂಭೀರ

author img

By

Published : Nov 9, 2022, 9:00 AM IST

electric shock
ವಿದ್ಯುತ್ ಶಾಕ್

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿಯ ಶ್ರೀ ಗೋಕರ್ಣನಾಥ ಕೋ-ಆಪರೇಟಿವ್ ಬ್ಯಾಂಕ್ ಮುಂಭಾಗ ಫ್ಲೆಕ್ಸ್ ಬ್ಯಾನರ್ ಅಳವಡಿಸುವಾಗ ವಿದ್ಯುತ್ ಶಾಕ್​ ತಗುಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಬೆಳ್ತಂಗಡಿ: ಫ್ಲೆಕ್ಸ್ ಬ್ಯಾನರ್​ ಅಳವಡಿಸುವಾಗ ವಿದ್ಯುತ್ ಶಾಕ್ ಹೊಡೆದು ಓರ್ವ ಮೃತಪಟ್ಟರು. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಈ ಘಟನೆ ಬೆಳ್ತಂಗಡಿ ಬಸ್ ನಿಲ್ದಾಣದ ಶ್ರೀ ಗೋಕರ್ಣನಾಥ ಕೋ-ಆಪರೇಟಿವ್ ಬ್ಯಾಂಕ್ ಮುಂಭಾಗ ನಡೆಯಿತು.

ಬೆಳ್ತಂಗಡಿಯ ಸಂಜಯನಗರ ನಿವಾಸಿ ಪ್ರಶಾಂತ್ (39) ಸಾವನ್ನಪ್ಪಿದ ಗೂಡ್ಸ್ ವಾಹನ ಚಾಲಕ. ಕೊಯ್ಯೂರು ಗ್ರಾಮದ ಮಲೆಬೆಟ್ಟು ನಿವಾಸಿ ಸಂಜೀವ ಅಚಾರ್ಯ ಅವರ ಮಗ ಸತೀಶ್ (25) ಸ್ಥಿತಿ ಗಂಭೀರವಾಗಿದೆ. ಭಾರತೀಯ ಮಜ್ದೂರು ಸಂಘ ದ.ಕ ಮತ್ತು ಉಡುಪಿ ಜಿಲ್ಲೆ ವತಿಯಿಂದ ನ.13ರಂದು ಮಂಗಳೂರಿನಲ್ಲಿ ನಡೆಯಲಿರುವ ಕುಟುಂಬ ಮಿಲನ ಕಾರ್ಯಕ್ರಮದ ಅಂಗವಾಗಿ ಬೆಳ್ತಂಗಡಿ ಬಸ್ ನಿಲ್ದಾಣದ ಪಕ್ಕದ ರಾಷ್ಟ್ರೀಯ ಹೆದ್ದಾರಿ ಬದಿ ಪ್ರಶಾಂತ್ ಹಾಗೂ ಸತೀಶ್ ಫ್ಲೆಕ್ಸ್ ಹಾಕುತ್ತಿದ್ದರು. ಫ್ಲೆಕ್ಸ್​ನ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ತಾಗಿದ ಪರಿಣಾಮ ಇಬ್ಬರಿಗೂ ಶಾಕ್ ಹೊಡೆದಿದೆ.

ಇದನ್ನೂ ಓದಿ: ಮೈಸೂರು: ವಿದ್ಯುತ್ ತಂತಿ ಸ್ಪರ್ಶಿಸಿ ಮೂವರು ರೈತರ ಸಾವು

ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಓರ್ವ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.