ಅಪಘಾತದಲ್ಲಿ ಯುವಕನ ಬ್ರೈನ್ ಡೆಡ್; ಅಂಗಾಂಗ ದಾನಕ್ಕೆ ಪೋಷಕರ ನಿರ್ಧಾರ

author img

By

Published : May 31, 2022, 10:50 AM IST

Parents decide to donate organs of brain dead son in Mangalore

ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬ್ರೈನ್ ಡೆಡ್ ಆದ ಯುವಕನ ಅಂಗಾಂಗ ದಾನಕ್ಕೆ ಪೋಷಕರು ನಿರ್ಧರಿಸಿದ್ದಾರೆ.

ಮಂಗಳೂರು(ದಕ್ಷಿಣ ಕನ್ನಡ): ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಂಗಳೂರಿನ ಕುಡುಪುಕಟ್ಟೆಯ ಯುವಕ ಧೀರಜ್ (25) ಎಂಬಾತನ ಮೆದುಳು ನಿಷ್ಕ್ರಿಯಗೊಂಡಿದ್ದು, ಪೋಷಕರು ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದಾರೆ.

ಮೇ 29ರ ರಾತ್ರಿ ಧೀರಜ್ ಗೆಳೆಯ ಗಣೇಶ್‌ ಎಂಬುವವರ ಮನೆಗೆಂದು ತೆರಳಿದ್ದರು. ಧೀರಜ್‌ನನ್ನು ಗಣೇಶ್‌ ಸ್ಕೂಟರ್​ನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಬಿಕರ್ಣಕಟ್ಟೆ ಬಳಿ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ರಾತ್ರಿ ಎರಡು ಗಂಟೆಯ ಸುಮಾರಿಗೆ ರಿಕ್ಷಾ ಚಾಲಕರೊಬ್ಬರು ಗಾಯಗೊಂಡು ಒದ್ದಾಡುತ್ತಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಇಬ್ಬರಿಗೂ ತೀವ್ರ ಸ್ವರೂಪದ ಗಾಯವಾಗಿದ್ದು, ಇದೀಗ ಧೀರಜ್​ನ ಮೆದುಳು ನಿಷ್ಕ್ರಿಯವಾಗಿದೆ ಎಂದು ವೈದ್ಯರು ಘೋಷಿಸಿದ್ದಾರೆ.

ಇದನ್ನೂ ಓದಿ: ಶಿಗ್ಗಾಂವಿ ಚಿತ್ರಮಂದಿರದಲ್ಲಿ ಶೂಟೌಟ್ ಪ್ರಕರಣ: ಮೂವರು ಆರೋಪಿಗಳು ಪೊಲೀಸ್​​ ವಶಕ್ಕೆ

ಈ ಹಿನ್ನೆಲೆಯಲ್ಲಿ ಧೀರಜ್​ನ ಅಂಗಾಂಗ ದಾನ ಮಾಡಲು ಪೋಷಕರು ನಿರ್ಧರಿಸಿದ್ದಾರೆ. ಚೆನ್ನೈ ವೈದ್ಯರ ತಂಡ ಮಂಗಳೂರಿನ ಎಜೆ ಆಸ್ಪತ್ರೆಗೆ ಆಗಮಿಸಲಿದ್ದು ಅಂಗಾಂಗಗಳನ್ನು ಕೊಂಡೊಯ್ಯಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.