ETV Bharat / state

ಮಂಗಳೂರಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ : ಮೂವರು ದಲ್ಲಾಳಿಗಳ ಬಂಧನ, ನಾಲ್ವರು ಯುವತಿಯರ ರಕ್ಷಣೆ

author img

By

Published : Mar 2, 2022, 5:38 PM IST

Updated : Mar 2, 2022, 5:50 PM IST

ನಗರದ ಬೆಂದೂರ್ ವೆಲ್​​ನ ಅಪಾರ್ಟ್ ಮೆಂಟ್​​​​ನ ಫ್ಲ್ಯಾಟ್​ವೊಂದರಲ್ಲಿ ಆರೋಪಿಗಳು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗ್ತಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡ ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್​​​ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ತಂಡ ದಾಳಿ ನಡೆಸಿ ದಲ್ಲಾಳಿಗಳನ್ನು ಬಂಧಿಸಿದ್ದಾರೆ.

ಮಂಗಳೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ
ಮಂಗಳೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ

ಮಂಗಳೂರು : ನಗರದ ಬೆಂದೂರ್ ವೆಲ್​​ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ನಗರ ಸಿಸಿಬಿ ಪೊಲೀಸರು, ಇಬ್ಬರು ಮಹಿಳೆಯರು ಸೇರಿದಂತೆ ಮೂವರು ದಲ್ಲಾಳಿಗಳನ್ನು ಬಂಧಿಸಿದ್ದಾರೆ. ಇದೇ ವೇಳೆ ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ.

ಮಂಗಳೂರಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ
ಮಂಗಳೂರಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ

ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮದ ಕೆ ಪಿ ಹಮೀದ್ (54), ನಗರದ ಆಕಾಶಭವನದ ಅನುಪಮ ಶೆಟ್ಟಿ (46) ಮತ್ತು ಎಕ್ಕೂರಿನ ನಿಶ್ಮಿತ (23) ಬಂಧಿತರು. ಇವರು ನಗರದ ಬೆಂದೂರ್ ವೆಲ್​​ನ ಅಪಾರ್ಟ್ ಮೆಂಟ್​​​​ನ ಫ್ಲ್ಯಾಟ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗ್ತಿದೆ.

ಇದನ್ನೂ ಓದಿ : ಸ್ಪಾ ಮಾಲೀಕರಿಗೆ ಬೆದರಿಕೆ, ಹಣ ವಸೂಲಿ ಆರೋಪ.. ಪತ್ರಕರ್ತ ಸೇರಿ ಐವರ ಬಂಧನ

ಈ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡ ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್​​​ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ತಂಡ ದಾಳಿ ನಡೆಸಿ ದಲ್ಲಾಳಿಗಳನ್ನು ಬಂಧಿಸಿದ್ದಾರೆ. ಇದೇ ವೇಳೆ ಪ್ಲಾಟ್ ನಲ್ಲಿದ್ದ ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ. ಬಂಧಿತರಿಂದ 5 ಮೊಬೈಲ್ ಫೋನ್, 50 ಸಾವಿರ ನಗದು ಮತ್ತು ಕಾರನ್ನು ವಶಪಡಿಸಿಕೊಳ್ಳಲಾಗಿದೆ.

Last Updated : Mar 2, 2022, 5:50 PM IST

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.