ETV Bharat / state

ಟ್ಯಾಂಕರ್ ಹರಿದು ವ್ಯಕ್ತಿ ಸಾವು: ಅಪಘಾತದ ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

author img

By

Published : Jun 16, 2019, 3:36 AM IST

ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದು, ಈ ದುರಂತದ ಭಯಾನಕ ದೃಶ್ಯಾವಳಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಟ್ಯಾಂಕರ್ ಹರಿದು ವ್ಯಕ್ತಿ ಸಾವು

ಮಂಗಳೂರು: ಟ್ಯಾಂಕರೊಂದು ಹರಿದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ. ರೋಡ್​ನ ಕೈಕಂಬದಲ್ಲಿ ನಡೆದಿದೆ.

ಮಲ್ಲೂರಿನ ಕಂಜಿಲ ಗುಡ್ಡೆ ನಿವಾಸಿ ಯಾದವ ಪೂಜಾರಿ ಮೃತ ದುರ್ದೈವಿ, ಮಲ್ಲೂರಿನಲ್ಲಿ ಅಂಗಡಿ ನಡೆಸುತ್ತಿದ್ದ ಯಾದವ ಪೂಜಾರಿಯವರು ಅಂಗಡಿಗೆ ಸಾಮಾಗ್ರಿಗಳನ್ನು ತರಲು ಬಿ.ಸಿ.ರೋಡ್​ಗೆ ಬಂದಿದ್ದು, ರಸ್ತೆ ದಾಟುವ ಸಂದರ್ಭದಲ್ಲಿ ಟ್ಯಾಂಕರ್​ವೊಂದು ಡಿಕ್ಕಿ ಹೊಡೆದಿತ್ತು. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಟ್ಯಾಂಕರ್ ಹರಿದು ವ್ಯಕ್ತಿ ಸಾವು

ಈ ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Intro:ಮಂಗಳೂರು: ಟ್ಯಾಂಕರೊಂದು ಹರಿದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ. ರೋಡ್ ನ ಕೈಕಂಬದಲ್ಲಿ ನಡೆದಿದೆ.

ಮಲ್ಲೂರಿನ ಕಂಜಿಲ ಗುಡ್ಡೆ ನಿವಾಸಿ ಯಾದವ ಪೂಜಾರಿ ಮೃತ ದುರ್ದೈವಿ.

Body:ಮಲ್ಲೂರಿನಲ್ಲಿ ಅಗಂಡಿ ನಡೆಸುತ್ತಿದ್ದ ಯಾದವ ಪೂಜಾರಿಯವರು ಅಂಗಡಿಗೆ ಸಾಮಾಗ್ರಿಗಳನ್ನು ತರಲು ಬಿ.ಸಿ.ರೋಡ್ ಗೆ ಬಂದಿದ್ದು,
ರಸ್ತೆ ದಾಟುವ ಸಂದರ್ಭದಲ್ಲಿ ಟ್ಯಾಂಕರ್ ವೊಂದು ಢಿಕ್ಕಿ ಹೊಡೆದಿತ್ತು. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಬಗ್ಗೆ ಬಂಟ್ವಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Reporter_Vishwanath KA10015Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.