ETV Bharat / state

ಮಂಗಳೂರಲ್ಲಿ ಶಾರದೋತ್ಸವ ಬ್ಯಾನರ್​ಗೆ ಹಾನಿ : ಸಿಸಿಟಿವಿಯಲ್ಲಿ ದುಷ್ಕರ್ಮಿಗಳ ಕೃತ್ಯ ಸೆರೆ

author img

By

Published : Oct 9, 2022, 4:36 PM IST

Updated : Oct 9, 2022, 5:26 PM IST

ಮಂಗಳೂರಿನ ಹೊರವಲಯದಲ್ಲಿರುವ ವಾಮಂಜೂರಿನಲ್ಲಿ ಅಳವಡಿಸಲಾಗಿದ್ದ ಶಾರದೋತ್ಸವ ಬ್ಯಾನರ್​ ಗಳನ್ನು ದುಷ್ಕರ್ಮಿಗಳು ಹರಿದು ಹಾಕಿದ್ದು, ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sharadotsava-banner-damaged-in-mangalore
ಮಂಗಳೂರಿನ ವಾಮಂಜೂರಿನಲ್ಲಿ ಶಾರದೋತ್ಸವ ಬ್ಯಾನರ್​ಗೆ ಹಾನಿ : ಸಿಸಿಟಿವಿಯಲ್ಲಿ ಸೆರೆ

ಮಂಗಳೂರು : ನಗರದ ಹೊರವಲಯದಲ್ಲಿರುವ ವಾಮಂಜೂರಿನಲ್ಲಿ ಶಾರದೋತ್ಸವ ಬ್ಯಾನರ್​ಗೆ ಹಾನಿ ಮಾಡಿದ ಘಟನೆ ನಡೆದಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಅಶಾಂತಿ ಸೃಷ್ಟಿಸಲು ದುಷ್ಕರ್ಮಿಗಳು ಯತ್ನಿಸಿದ್ದು, ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶನಿವಾರ ತಡರಾತ್ರಿ ದುಷ್ಕರ್ಮಿಗಳು ಈ ಕೃತ್ಯವನ್ನು ಎಸಗಿದ್ದಾರೆ. ಕಾರಿನಲ್ಲಿ ಬಂದ ಯುವಕರ ತಂಡವೊಂದು ಬ್ಯಾನರ್ ಹಾನಿಗೊಳಿಸಿದ್ದು, ಈ ವೇಳೆ 10ಕ್ಕೂ ಅಧಿಕ ಬ್ಯಾನರ್ ಗಳಿಗೆ ಹಾನಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮಂಗಳೂರಲ್ಲಿ ಶಾರದೋತ್ಸವ ಬ್ಯಾನರ್​ಗೆ ಹಾನಿ : ಸಿಸಿಟಿವಿಯಲ್ಲಿ ದುಷ್ಕರ್ಮಿಗಳ ಕೃತ್ಯ ಸೆರೆ

ಬ್ಯಾನರ್ ಹರಿದುಹಾಕುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ಬಗ್ಗೆ ವಾಮಂಜೂರಿನ ಹುಲಿವೇಷ ತಂಡವು ಮಂಗಳೂರು ಗ್ರಾಮಾಂತರ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಿದೆ.

ಇದನ್ನೂ ಓದಿ : ಮೇಕೆಗಳ ಕದ್ದ ಶಂಕೆ ಮೇಲೆ ಜಗಳ ಮಾಡಿದ ರೈತನಿಗೆ ಗುಂಡಿಕ್ಕಿ ಕೊಲೆ

Last Updated : Oct 9, 2022, 5:26 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.