ETV Bharat / state

ದಾವಣಗೆರೆಯಲ್ಲಿ ಭೀಕರ ಕಾರು ಅಪಘಾತ: ಇಬ್ಬರು ಸಾವು, ಐವರಿಗೆ ಗಂಭೀರ ಗಾಯ

author img

By ETV Bharat Karnataka Team

Published : Dec 4, 2023, 11:01 PM IST

Etv Bharat2-dead-and-5-seriously-injured-in-car-accident-in-davanagere
ದಾವಣಗೆರೆಯಲ್ಲಿ ಭೀಕರ ಕಾರು ಅಪಘಾತ: ಇಬ್ಬರು ಸಾವು, ಐವರಿಗೆ ಗಂಭೀರ ಗಾಯ

ಕಾರು ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ದಾವಣಗೆರೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.‌

ದಾವಣಗೆರೆ: ಮದುವೆ ಮುಗಿಸಿಕೊಂಡು ವಾಪಸ್​ ಆಗುವಾಗ ಕಾರು ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ದಾವಣಗೆರೆಯ ಶಿರಮಗೊಂಡನಹಳ್ಳಿ ಬ್ರಿಡ್ಜ್ ಬಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಘಟನೆ ನಡೆದಿದೆ.‌ ಅರುಣ್ ಶೆಟ್ಟರ್ (50), ವಿಜಯಲಕ್ಷ್ಮಿ‌ ಶೆಟ್ಟರ್ (70) ಮೃತ ತಾಯಿ- ಮಗ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ದಾವಣಗೆರೆಯ ಎಸ್​ಎಸ್​ ಹೈಟೆಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.‌

7 ಜನ ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದಿಂದ ತುಮಕೂರಿಗೆ ಮದುವೆಗೆ ತೆರಳಿ ಹೊಸರಿತ್ತಿ ಗ್ರಾಮಕ್ಕೆ ವಾಪಸ್​ ಆಗುವಾಗ ಈ ಘಟನೆ ಸಂಭವಿಸಿದೆ. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಕಂದಕಕ್ಕೆ ಉರುಳಿದ ಪ್ರವಾಸಿ ಟೆಂಪೋ ಟ್ರಾವೆಲರ್: ಇಬ್ಬರು ಪ್ರವಾಸಿಗರು ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.