ETV Bharat / state

ಯಾರ ಜೊತೆಗೂ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ, ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತೇವೆ: ಬಿಎಸ್​ವೈ

author img

By

Published : May 5, 2023, 2:48 PM IST

bsy
ಬಿಎಸ್ ಯಡಿಯೂರಪ್ಪ

ದಾವಣಗೆರೆಯಲ್ಲಿ ಬಿಎಸ್ ಯಡಿಯೂರಪ್ಪ ಮಾತನಾಡಿದ್ದು, ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ.

ಯಾರ ಜೊತೆಗೂ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ,

ದಾವಣಗೆರೆ: ಯಾರ ಜೊತೆ ಹೊಂದಾಣಿಕೆಯ ಪ್ರಶ್ನೆಯೆ ಇಲ್ಲ, ರಾಜ್ಯದಲ್ಲಿ ಬಿಜೆಪಿ ಪರ ಒಳ್ಳೆಯ ವಾತಾವರಣ ಇದೆ. ನೂರಕ್ಕೆ ನೂರರಷ್ಟು ನಾವು ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ದಾವಣಗೆರೆಯಲ್ಲಿ ಮಾತನಾಡಿದ ಅವರು 135 ಸೀಟು ಗೆದ್ದು ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತೇವೆ. ಯಾರ ಜೊತೆ ಹೊಂದಾಣಿಕೆಯ ಪ್ರಶ್ನೆಯೆ ಇಲ್ಲ. ಬಜರಂಗ ದಳ ವಿಚಾರದಲ್ಲಿ ಕಾಂಗ್ರೆಸ್ ಮೂರ್ಖತನ ಮಾಡಿದೆ. ಮುಂಬರುವ ದಿನಗಳಲ್ಲಿ ಅವರಿಗೆ ತಕ್ಕ ಶಾಸ್ತಿ ಆಗುತ್ತೆ. ಮೋದಿ ಅಮಿತಾ ಶಾ ರೋಡ್ ಶೋ ನಂತರ ವಾತಾವರಣ ಬದಲಾಗಿದೆ. ಬಿಜೆಪಿಗೆ ಮತ್ತಷ್ಟು ಬಲ ಬಂದಿದೆ.

ಸ್ವತಂತ್ರ ಸರ್ಕಾರ ರಚನೆ ಮಾಡುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದರು. ಇನ್ನು ಸ್ವತಃ ಶಕ್ತಿ ಮೇಲೆ ಸರ್ಕಾರ ರಚನೆ ಮಾಡಲಿದ್ದು, ನಮ್ಮ ಕಾರ್ಯಕರ್ತರು ಹಗಲು ರಾತ್ರಿ ಎನ್ನದೇ ಕೆಲಸ ಮಾಡ್ತಿದ್ದಾರೆ. ನೂರಕ್ಕೆ ನೂರರಷ್ಟು ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬಿಜೆಪಿ ಮುಖಂಡ ಕಾಂಗ್ರೆಸ್ ಸೇರ್ಪಡೆ, ಶಾಸಕ ರೇಣುಕಾಚಾರ್ಯಗೆ ಶಾಕ್

ಬಿಜೆಪಿ ಸರ್ಕಾರ ರೈತ ವಿರೋಧಿಯೆಂದ ಮಾಜಿ ಸಿಎಂ ಕುಮಾರಸ್ವಾಮಿ: ನಿನ್ನೆಯ ದಿನ ದಾವಣಗೆರೆ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪರ ಮತಯಾಚಿಸಲು ಆಗಮಿಸಿದ್ದ ಅವರು ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ, ಬಿಜೆಪಿ ಸರ್ಕಾರ ರೈತ ವಿರೋಧಿ ಸರ್ಕಾರ ಪ್ರತಿಯೊಂದು ಬೆಲೆ ಏರಿಕೆ ಮಾಡಿದೆ. ಸಿಲಿಂಡರ್ ಬೆಲೆ ಗಗನಕ್ಕೇರಿದೆ. ನಮ್ಮ ಸರ್ಕಾರ ರಚನೆ ಆದರೆ ಪ್ರತಿ ವರ್ಷ ಐದು ಸಿಲಿಂಡರ್ ಉಚಿತವಾಗಿ ನೀಡುತ್ತೇವೆ ಎಂದು ಹೇಳಿದರು.

ಜೊತೆಗೆ ಬಿಜೆಪಿ ಸರ್ಕಾರದ ಆಡಳಿತದಲ್ಲಿ ದಿನೇ ದಿನೇ ರಸಗೊಬ್ಬರದ ಬೆಲೆ ಏರಿಕೆಯಾಗುತ್ತಲೆ ಇದೆ. ಇದಕ್ಕಾಗಿ ಬಿತ್ತೆನೆ ಬೀಜ ಮತ್ತು ರಸಗೊಬ್ಬರ ಖರೀದಿಗೆ ಪ್ರತಿ ಎಕರೆಗೆ ಸರ್ಕಾರವೇ ಹತ್ತು ಸಾವಿರ ಹಣವನ್ನು ಉಚಿತವಾಗಿ ಕೋಡುತ್ತೇವೆ. ಹಳ್ಳಿಯ ಹೆಣ್ಣುಮಕ್ಕಳು ಸ್ವಾವಲಂಬಿಯಾಗಿ ಬದಕಲು ಪಂಚರತ್ನ ಯೋಜನೆಯಡಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸುತ್ತೇವೆ ಎಂದು ಭರವಸೆ ಕೂಡ ನೀಡಿದ್ದಾರೆ.

ತಾಕತ್ತು ಇದ್ದರೆ ಬಜರಂಗ ದಳ ನಿಷೇಧ ಮಾಡಿ-ಶಾಸಕ ರೇಣುಕಾಚಾರ್ಯ: ಮೊನ್ನೆಯ ದಿನ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕೆಂಗಲಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಅವರೇ ನಿಮಗೆ ತಾಕತ್ ಇದ್ದರೆ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಸಂಘಟನೆಗಳನ್ನು ನಿಷೇಧ ಮಾಡಿ, ನಾವು ಪಿಎಫ್ಐ ಎಸ್​​ಡಿಪಿಐ ನಂತಹ ಭಯೋತ್ಪಾದಕ ಸಂಘಟನೆಗಳನ್ನು ಮಟ್ಟಾ ಹಾಕುತ್ತೇವೆ ಎಂದು ಖಡಕ್​ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಮೋದಿ ರೋಡ್ ಶೋ ಮಾರ್ಗದಲ್ಲಿ ನೀಟ್ ಪರೀಕ್ಷಾ ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶ: ಶೋಭಾ ಕರಂದ್ಲಾಜೆ

ಇದನ್ನೂ ಓದಿ: ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧದಿಂದ ಕಾಂಗ್ರೆಸ್​ ಪಕ್ಷಕ್ಕೆ ಹಾನಿಯಿಲ್ಲ: ಮಧು ಬಂಗಾರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.