ETV Bharat / state

ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

author img

By

Published : Aug 30, 2021, 11:42 AM IST

Capture the leopard  in davanagere
ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದಾಗಿನಕಟ್ಟೆ ಗ್ರಾಮದಲ್ಲಿ ಚಿರತೆ ಸೆರೆಯಾಗಿದೆ. ಈ ಹಿನ್ನೆಲೆ ಇಷ್ಟು ದಿನಗಳ ಕಾಲ ಭಯಭೀತರಾಗಿದ್ದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ದಾವಣಗೆರೆ: ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆಯಾಗಿದ್ದು, ಪ್ರಾಣಭಯದಿಂದ ಇದ್ದ ಜನ್ರು ನಿಟ್ಟುಸಿರು ಬಿಟ್ಟಿದ್ದಾರೆ. ಗ್ರಾಮದ ಸುತ್ತಮುತ್ತ ಕಾಣಿಸಿಕೊಂಡು ಜನರಲ್ಲಿ ಭಯದ‌ ವಾತಾವರಣ ಸೃಷ್ಟಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ಚನ್ನಗಿರಿ ತಾಲೂಕಿನ ದಾಗಿನಕಟ್ಟೆ ಗ್ರಾಮದಲ್ಲಿ ಚಿರತೆ ಸೆರೆಯಾಗಿದ್ದು, ಕಳೆದ 4 ದಿನಗಳಿಂದ ಜನರ ನೆಮ್ಮದಿ‌ ಕೆಡಿಸಿತ್ತು. ಅರಣ್ಯ ಇಲಾಖೆ ಹಾಗು ಸ್ಥಳೀಯರ ಕಾರ್ಯಾಚರಣೆಯಿಂದ ಚಿರತೆಯನ್ನ ಸೆರೆ ಹಿಡಿಯಲಾಗಿದೆ.

ಕಳೆದ 4 ದಿನಗಳಿಂದ ಸ್ಥಳೀಯರಿಗೆ ಪ್ರತ್ಯಕ್ಷವಾಗುತ್ತಿದ್ದ ಚಿರತೆಯಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು. ಜಮೀನುಗಳಿಗೆ ತೆರಳುವ ರೈತರು ಭಯಭೀತರಾಗಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.