ETV Bharat / state

ಮಳೆಯಿಂದ ಬೆಳೆ ಹಾನಿಯಾದ ಜಮೀನುಗಳಿಗೆ ಭೇಟಿ ನೀಡಿದ ಎಂ.ಪಿ.ರೇಣುಕಾಚಾರ್ಯ

author img

By

Published : Aug 8, 2022, 10:31 PM IST

Kn_dvg_03_08_ vegetable_haani_av_7204336
ಎಂ.ಪಿ.ರೇಣುಕಾಚಾರ್ಯ

ಭಾರಿ ಮಳೆಯಿಂದ ಬೆಳೆ ಹಾನಿಯಾಗಿರುವ ಜಮೀನುಗಳಿಗೆ ಹೊನ್ನಾಳಿ ಶಾಸಕ ಭೇಟಿ ನೀಡಿ ಪರಿಶೀಲಿಸಿದರು.

ದಾವಣಗೆರೆ: ಜಿಲ್ಲೆಯಲ್ಲಿ ಚಿಕ್ಕ ಪುಟ್ಟ ಜಮೀನುಗಳನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ರೈತಾಪಿ ವರ್ಗಕ್ಕೆ ಮಳೆ ಪೆಟ್ಟು ನೀಡಿದೆ. ವರುಣಾರ್ಭದಿಂದ ಸಾವಿರಾರು ಎಕರೆ ತೋಟಗಾರಿಕೆ ಬೆಳೆ ಹಾಗು ತರಕಾರಿ ಬೆಳೆ ನೆಲಕಚ್ಚಿದೆ. ಚನ್ನಗಿರಿ, ಹೊನ್ನಾಳಿ, ‌ನ್ಯಾಮತಿ‌ ತಾಲೂಕುಗಳಲ್ಲಿ ಅತಿಹೆಚ್ಚು ಮಳೆ ಬಿದ್ದಿದ್ದು ಈ ಭಾಗದಲ್ಲಿ ರೈತರು ಬೆಳೆದಿದ್ದ ಬೀನ್ಸ್, ಟೊಮೆಟೊ, ಹೂಕೋಸು, ಸೇರಿದಂತೆ ಅನೇಕ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿದೆ. ಹೊನ್ನಾಳಿಯ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹಾನಿಗೊಳಗಾದ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದು, ಸರ್ಕಾರದಿಂದ ಪರಿಹಾರ ಕಲ್ಪಿಸುವುದಾಗಿ ತಿಳಿಸಿದರು.

ಇದನ್ನೂ ಓದಿ: ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.