ದಾವಣಗೆರೆ: ಅಶಕ್ತ ಜನರಿಗೆ ಹಣದ ಅಮಿಷ ತೋರಿಸಿ ಕ್ರೈಸ್ತ ಧರ್ಮಕ್ಕೆ ಬಲವಂತವಾಗಿ ಮತಾಂತರ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ನಗರದ ಶಾಮನೂರು ರಸ್ತೆಯಲ್ಲಿರುವ ರಸ್ತೆಯ ಸಿದ್ದವೀರಪ್ಪ ಬಡಾವಣೆಯಲ್ಲಿರುವ ಅನಧಿಕೃತ ನ್ಯೂ ಲೈಫ್ ಫೆಲ್ಲೋಶಿಫ್ ಚರ್ಚಿನಲ್ಲಿ ಈ ಘಟನೆ ನಡೆದಿದೆ. ಚರ್ಚಿನ ಅಧಿಕಾರಿಗಳು ಜನರಿಗೆ ಹಣದ ಆಸೆ ತೋರಿಸಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸುತ್ತಿದ್ದರು ಎಂದು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಆರೋಪಿಸಿದರು. ಈ ವೇಳೆ ಅಲ್ಲಿದ್ದ ಕೆಲವರನ್ನು ತರಾಟೆಗೆ ತೆಗೆದುಕೊಂಡಾಗ ಚರ್ಚ್ ಸಿಬ್ಬಂದಿ ಮತ್ತು ಕಾರ್ಯಕರ್ತರ ನಡುವೆ ತಳ್ಳಾಟ ನಡೆದಿದೆ.
ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ವಿದ್ಯಾ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.