ದಾವಣಗೆರೆ: ನಗರದ ಶಾಮನೂರು ರಸ್ತೆಯಲ್ಲಿ ಭತ್ತ ತುಂಬಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಭಾರೀ ಅನಾಹುತ ತಪ್ಪಿದೆ.
ಮಾರುಕಟ್ಟೆಗೆ ಭತ್ತ ತೆಗೆದುಕೊಂಡು ಹೋಗುತ್ತಿದ್ದ ಲಾರಿ, ನಗರದೊಳಗೆ ಪ್ರವೇಶ ಮಾಡುವ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಲಾರಿಯಲ್ಲಿದ್ದ ಭತ್ತದ ಕೆಲ ಚೀಲಗಳು ನೀರುಪಾಲಾಗಿದ್ದು, ಲಾರಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕ್ರೇನ್ ಮೂಲಕ ಲಾರಿ ಮೇಲೆತ್ತಲಾಯಿತು.