ದಾವಣಗೆರೆ: ಬೋರ್​ವೆಲ್​ ರಿಪೇರಿ ವೇಳೆ ವಿದ್ಯುತ್ ಸ್ಪರ್ಶಿಸಿ ಓರ್ವ ಸಾವು, ಮತ್ತೊಬ್ಬ ಗಂಭೀರ

author img

By

Published : Aug 4, 2022, 3:22 PM IST

davanagere

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿಯ ವಿದ್ಯುತ್ ಪ್ರಸರಣ ಕೇಂದ್ರದಲ್ಲಿ ಬೋರ್​ವೆಲ್ ಕೆಟ್ಟು ಹೋಗಿದ್ದು ಸರಿಪಡಿಸುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ.

ದಾವಣಗೆರೆ: ಕೆಟ್ಟುಲ ಹೋಗಿದ್ದ ಬೋರ್​ವೆಲ್​ ರಿಪೇರಿ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವರಹಳ್ಳಿ ಗ್ರಾಮದ ನಿವಾಸಿ ರವಿ (40) ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡ ರಾಜು (35) ಆಸ್ಪತ್ರೆಗೆ ದಾಖಲಾಗಿದ್ದಾರೆೆ.

ಬೋರ್​ವೆಲ್​ ರಿಪೇರಿ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

ಕೊಳವೆ ಬಾವಿಗೆ ಕಬ್ಬಿಣದ ಪೈಪ್ ಅಳವಡಿಸುವಾಗ ಪೈಪ್ ​ಮೇಲಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಅವಘಡ ಉಂಟಾಗಿದೆ. ದೇವರಹಳ್ಳಿ ವಿದ್ಯುತ್ ಪ್ರಸರಣದ ಕೇಂದ್ರಕ್ಕೆ ಮುತ್ತಿಗೆ ಹಾಕಿದ ಸಂಬಂಧಿಕರು ಸೂಕ್ತ ಪರಿಹಾರ‌ ಕಲ್ಪಿಸುವಂತೆ ಬೆಸ್ಕಾಂ ಅಧಿಕಾರಿಗಳನ್ನು ಒತ್ತಾಯಿಸಿದರು. ಸ್ಥಳಕ್ಕಾಗಮಿಸಿದ ಚನ್ನಗಿರಿ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.

ಇದನ್ನೂ ಓದಿ: ಮೋದಿ ದೂರದೃಷ್ಟಿ ನಾಯಕ, ಅಮಿತ್ ಶಾ ದಕ್ಷ ನಾಯಕ: ಸಿಎಂ ಬೊಮ್ಮಾಯಿ‌ ಬಣ್ಣನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.