ದಾವಣಗೆರೆ: ಸಿದ್ದರಾಮಯ್ಯನವರು ಸದಾ ಪ್ರಚಾರದಲ್ಲಿ ಇರಬೇಕೆಂದು ಏನೇನೋ ಹೇಳಿಕೆ ನೀಡುತ್ತಿದ್ದಾರೆ. ಅವರು ಏನನ್ನಾದರೂ ಮಾತನಾಡದೇ ಇದ್ದರೆ ಕಾಂಗ್ರೆಸ್ನಲ್ಲಿ ಕಳೆದುಹೋಗ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದರು.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಗೋಹತ್ಯೆ, ಆರ್ಎಸ್ಎಸ್ ಮೇಲೆ ಕೋಪ ಇಲ್ಲ, ಬದಲಿಗೆ ಕಾಂಗ್ರೆಸ್ನಲ್ಲಿ ಅಸ್ತಿತ್ವ ಉಳಿಸಿಕೊಳ್ಳುವುದಕ್ಕೆ ಅವರು ತಮ್ಮ ಕೋಪವನ್ನು ಡಿಕೆಶಿ ಮೇಲೆ ತೋರುವ ಬದಲು ಬಿಜೆಪಿ ವಿರುದ್ಧ ಏನೇನೋ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ನಲ್ಲಿ ಡಿಕೆಶಿ ಪ್ರಭಾವ ಹೆಚ್ಚಾಗಿ ಎಲ್ಲಾ ಕಡೆ ಅವರೇ ಕಾಣುತ್ತಿರುವುದರಿಂದ ಸಿದ್ದರಾಮಯ್ಯ ಹೀಗೆಲ್ಲ ಮಾಡುತ್ತಿದ್ದಾರೆ ಎಂದಿದ್ದಾರೆ.
ಡಿಕೆಶಿಯನ್ನು ಮುಗಿಸಲು ಪ್ರತಿದಿನ ಸಿದ್ದರಾಮಯ್ಯನವರು ಬಿಜೆಪಿ ನಾಯಕರ ಬಗ್ಗೆ ಮಾಧ್ಯಮಗಳಲ್ಲಿ ಬೇಕಾಬಿಟ್ಟಿಯಾಗಿ ಮಾತನಾಡುತ್ತಿದ್ದಾರೆ. ಡಿಕೆಶಿ ಹಾಗೂ ಸಿದ್ದರಾಮಯ್ಯನವರ ಮಧ್ಯೆ ಕಾಂಪಿಟೇಷನ್ ಜಾಸ್ತಿಯಾಗಿದೆ. ಆದ್ದರಿಂದ ಕಾಂಗ್ರೆಸ್ನಲ್ಲಿ ಒಳ ಜಗಳ ಹೆಚ್ಚಾಗಿದೆ ಎಂದು ಕಟೀಲ್ ಆರೋಪಿಸಿದ್ದಾರೆ.
ಆರ್ಎಸ್ಎಸ್ಗೆ ಅದರದ್ದೇ ಆದ ಕೆಲಸ ಕಾರ್ಯಗಳಿವೆ. ಎಲ್ಲಾ ಸಮುದಾಯಗಳನ್ನು ಜೋಡಿಸುವ ಕಾರ್ಯವನ್ನು ಆರ್ಎಸ್ಎಸ್ ಮಾಡುತ್ತಿದೆ ಎಂದು ಅವರು ಹೇಳಿದರು.