ETV Bharat / state

ಸಿದ್ದರಾಮಯ್ಯನವರು ಮಾತನಾಡಲಿಲ್ಲ ಅಂದ್ರೆ ಕಾಂಗ್ರೆಸ್​​​ನಲ್ಲಿ ಕಳೆದುಹೋಗ್ತಾರೆ; ಕಟೀಲ್

author img

By

Published : Jan 6, 2021, 11:27 AM IST

Updated : Jan 6, 2021, 12:34 PM IST

nalinkumar-kateel-statement-about-siddaramaiah
ನವೀನ್ ಕುಮಾರ್‌ ಕಟೀಲ್

ಸಿದ್ದರಾಮಯ್ಯಗೆ ಗೋಹತ್ಯೆ, ಆರ್​ಎಸ್ಎಸ್ ಮೇಲೆ ಕೋಪ ಇಲ್ಲ, ಬದಲಿಗೆ ಕಾಂಗ್ರೆಸ್​​ನಲ್ಲಿ ಅಸ್ತಿತ್ವ ಉಳಿಸಿಕೊಳ್ಳುವುದಕ್ಕೆ ಅವರು ತಮ್ಮ ಕೋಪವನ್ನು ಡಿಕೆಶಿ ಮೇಲೆ ತೋರುವ ಬದಲು ಬಿಜೆಪಿ ವಿರುದ್ಧ ಏನೇನೋ ಮಾತನಾಡುತ್ತಿದ್ದಾರೆ ಎಂದು ನಳೀನ್‌ಕುಮಾರ್ ಕಟೀಲ್ ಹೇಳಿದ್ದಾರೆ.

ದಾವಣಗೆರೆ: ಸಿದ್ದರಾಮಯ್ಯನವರು ಸದಾ ಪ್ರಚಾರದಲ್ಲಿ ಇರಬೇಕೆಂದು ಏನೇನೋ ಹೇಳಿಕೆ ನೀಡುತ್ತಿದ್ದಾರೆ. ಅವರು ಏನನ್ನಾದರೂ ಮಾತನಾಡದೇ ಇದ್ದರೆ ಕಾಂಗ್ರೆಸ್​​ನಲ್ಲಿ ಕಳೆದುಹೋಗ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್ ಕಟೀಲ್ ವ್ಯಂಗ್ಯವಾಡಿದರು.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಗೋಹತ್ಯೆ, ಆರ್​ಎಸ್ಎಸ್ ಮೇಲೆ ಕೋಪ ಇಲ್ಲ, ಬದಲಿಗೆ ಕಾಂಗ್ರೆಸ್​​ನಲ್ಲಿ ಅಸ್ತಿತ್ವ ಉಳಿಸಿಕೊಳ್ಳುವುದಕ್ಕೆ ಅವರು ತಮ್ಮ ಕೋಪವನ್ನು ಡಿಕೆಶಿ ಮೇಲೆ ತೋರುವ ಬದಲು ಬಿಜೆಪಿ ವಿರುದ್ಧ ಏನೇನೋ ಮಾತನಾಡುತ್ತಿದ್ದಾರೆ. ಕಾಂಗ್ರೆಸ್​​ನಲ್ಲಿ ಡಿಕೆಶಿ ಪ್ರಭಾವ ಹೆಚ್ಚಾಗಿ ಎಲ್ಲಾ ಕಡೆ ಅವರೇ ಕಾಣುತ್ತಿರುವುದರಿಂದ ಸಿದ್ದರಾಮಯ್ಯ ಹೀಗೆಲ್ಲ ಮಾಡುತ್ತಿದ್ದಾರೆ ಎಂದಿದ್ದಾರೆ.

ನಳೀನ್‌ಕುಮಾರ್ ಕಟೀಲ್ ಹೇಳಿಕೆ

ಡಿಕೆಶಿಯನ್ನು ಮುಗಿಸಲು ಪ್ರತಿದಿನ ಸಿದ್ದರಾಮಯ್ಯನವರು ಬಿಜೆಪಿ ನಾಯಕರ ಬಗ್ಗೆ ಮಾಧ್ಯಮಗಳಲ್ಲಿ ಬೇಕಾಬಿಟ್ಟಿಯಾಗಿ ಮಾತನಾಡುತ್ತಿದ್ದಾರೆ. ಡಿಕೆಶಿ ಹಾಗೂ ಸಿದ್ದರಾಮಯ್ಯನವರ ಮಧ್ಯೆ ಕಾಂಪಿಟೇಷನ್​ ಜಾಸ್ತಿಯಾಗಿದೆ. ಆದ್ದರಿಂದ ಕಾಂಗ್ರೆಸ್​​ನಲ್ಲಿ ಒಳ ಜಗಳ ಹೆಚ್ಚಾಗಿದೆ ಎಂದು ಕಟೀಲ್ ಆರೋಪಿಸಿದ್ದಾರೆ.

ಆರ್​ಎಸ್ಎಸ್​ಗೆ ಅದರದ್ದೇ ಆದ ಕೆಲಸ ಕಾರ್ಯಗಳಿವೆ. ಎಲ್ಲಾ ಸಮುದಾಯಗಳನ್ನು ಜೋಡಿಸುವ ಕಾರ್ಯವನ್ನು ಆರ್​ಎಸ್​ಎಸ್​ ಮಾಡುತ್ತಿದೆ ಎಂದು ಅವರು ಹೇಳಿದರು.

Last Updated :Jan 6, 2021, 12:34 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.