ರಸ್ತೆಯಾಗದಿದ್ರೆ ಮದ್ವೆಯಾಗಲ್ಲ ಎಂದಿದ್ದ ಯುವತಿಗೆ ಖುಷಿ; ರಾಂಪುರ ರಸ್ತೆ ಕಾಮಗಾರಿ ಕೊನೆಗೂ ಆರಂಭ-ಈಟಿವಿ ಭಾರತ ಇಂಪ್ಯಾಕ್ಟ್

author img

By

Published : Sep 17, 2021, 6:06 PM IST

Updated : Sep 17, 2021, 6:39 PM IST

Road construction work started in rampura

ಈಟಿವಿ ಭಾರತ ವರದಿ ಬಳಿಕ ಕೆಲವೇ ಗಂಟೆಗಳಲ್ಲಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಭೇಟಿ ನೀಡಿದ್ದರು. ಈ ವೇಳೆ ಎರಡೇ ದಿನಗಳಲ್ಲಿ ಕಾಮಗಾರಿ ಆರಂಭಿಸುವುದಾಗಿ ಭರವಸೆ ನೀಡಿದ್ದರು. ಇಂದು ಕೊಟ್ಟ ಮಾತಿನಂತೆ ತಾಲೂಕಿನ ರಾಂಪುರ ಗ್ರಾಮದಲ್ಲಿ ಜಿಲ್ಲಾಡಳಿತ ರಸ್ತೆ ಕಾಮಗಾರಿ ಆರಂಭಿಸಿತು.

ದಾವಣಗೆರೆ: ತಾಲೂಕಿನ ರಾಂಪುರ ಗ್ರಾಮದ ಹದೆಗೆಟ್ಟ ರಸ್ತೆಗೆ ಕೊನೆಗೂ ಕಾಯಕಲ್ಪ ಸಿಕ್ಕಿದೆ.

ರಾಂಪುರ ಗ್ರಾಮದಲ್ಲಿ ಜಿಲ್ಲಾಡಳಿತ ರಸ್ತೆ ಕಾಮಗಾರಿ ಆರಂಭ

ಜಿಲ್ಲೆಯ ಮಾಯಕೊಂಡ ಹೋಬಳಿಯ ರಾಂಪುರ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆಗೆ ಕೆಲವೇ ದಿನಗಳಲ್ಲಿ ಟಾರ್ ಕಾಣಲಿದೆ. ಸ್ಥಳಕ್ಕೆ ಜಿಲ್ಲಾ ಪಂಚಾಯತ್ ‌ಸಿಇಒ ವಿಜಯ ಮಹಾಂತೇಶ್ ದಾನಮ್ಮನವರ್ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಿಲ್ಲಾ ಕೇಂದ್ರದಿಂದ ಕೂಗಳತೆ ದೂರದಲ್ಲಿರುವ ರಾಂಪುರ‌ಗ್ರಾಮ ಮೂಲ ಸೌಲಭ್ಯಗಳಿಂದ ವಂಚಿತವಾಗಿತ್ತು‌. ಬಸ್ ಸಂಪರ್ಕ ಇಲ್ಲದೇ ಈ ಗ್ರಾಮದ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮೊಟಕುಗೊಳಿಸಿದ್ದರು. ಅಷ್ಟೇ ಅಲ್ಲ, ಈ ಗ್ರಾಮದಲ್ಲಿ ಮೂಲ ಸೌಕರ್ಯ ಕೊರತೆಯ ಕಾರಣದಿಂದಾಗಿ ಹೆಣ್ಣುಮಕ್ಕಳು ಹೆಚ್ಚಿನ ವಿದ್ಯಾಭ್ಯಾಸವನ್ನೂ ಮಾಡಿಲ್ಲ. ಗ್ರಾಮಗಳಲ್ಲಿ ಯಾವುದೇ ಮೂಲ ಸೌಕರ್ಯಗಳಿಲ್ಲ ಎಂದು ಜನರು ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರಂತೆ. ಇಲ್ಲಿಂದ ಹೆಣ್ಣು ತರಲು ಕೂಡಾ ಜನ ಇಚ್ಚಿಸುತ್ತಿಲ್ಲ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದರು.

ಇದನ್ನೂ ಓದಿ: ಸೂಕ್ತ ರಸ್ತೆ ಆಗೋವರೆಗೂ ಮದುವೆ ಆಗೋದಿಲ್ಲ: ಪಿಎಂ, ಸಿಎಂಗೆ ಪತ್ರ ಬರೆದು ಬೆಣ್ಣೆನಗರಿ ಯುವತಿ ಶಪಥ

ತನ್ನ ಗ್ರಾಮಕ್ಕೆ ಡಾಂಬರು ರಸ್ತೆ ಆಗುವ ತನಕ ಮದುವೆಯಾಗುವುದಿಲ್ಲ ಎಂದು ಯುವತಿ ಬಿಂದು ಪಟ್ಟು ಹಿಡಿದಿದ್ದು ಇತ್ತೀಚೆಗೆ ದೊಡ್ಡ ಸುದ್ದಿಯಾಗಿತ್ತು. ಈ ಸಮಸ್ಯೆ ಬಗೆಹರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು‌.‌

ಇದನ್ನೂ ಓದಿ: 'ನಾವು ರಸ್ತೆನೂ ಮಾಡಿಸ್ತೀವಿ, ಆಕೆಯ ಲಗ್ನನೂ ಮಾಡಿಸ್ತೀವಿ': ರಸ್ತೆಯಾಗದೆ ಮದ್ವೆಯಾಗಲ್ಲ ಎಂದ ಯುವತಿಗೆ ದಾವಣಗೆರೆ ಡಿಸಿ ಭರವಸ

Last Updated :Sep 17, 2021, 6:39 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.