ETV Bharat / state

ಇಲ್ಲ, ಅಂತಹ ಹಗುರ ಪ್ರಶ್ನೆಗೆ ನಾ ಉತ್ತರಿಸಲ್ಲ ಅಂದರು ಮಾಜಿ ಸಿಎಂ ಬಿಎಸ್‌ವೈ..

author img

By

Published : Oct 19, 2021, 5:33 PM IST

ಎಲ್ಲರ ಪರಿಶ್ರಮ, ಮೋದಿಯವರ ಅಲೆ ನಮ್ಮ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಜ‌ನ‌ ಮನ್ನಣೆ ಕೊಡುತ್ತಾರೆ ಎಂಬ ವಿಶ್ವಾಸ ಇದೆ..

we will win in the both by election says bsy
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ

ದಾವಣಗೆರೆ : ಎರಡೂ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ವಾತಾವರಣ ಇದೆ. ನಮ್ಮ ಮುಖಂಡರು, ಶಾಸಕರು, ಪಕ್ಷದ ಕಾರ್ಯಕರ್ತರು ಉತ್ತಮವಾಗಿ ಪ್ರಚಾರ ಕೈಗೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದರು.

ಬೈ ಎಲೆಕ್ಷನ್‌ ಕುರಿತಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿರುವುದು..

ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿ ಮಾತನಾಡಿದ ಅವರು, ನಾನು ಇವತ್ತು ಆಲಮಟ್ಟಿಗೆ ಹೋಗಿ ಉಳಿದು, ನಾಳೆಯಿಂದ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುತ್ತೇನೆ. ಎರಡು ಕ್ಷೇತ್ರದಲ್ಲೂ ಬಿಜೆಪಿ ನೂರಕ್ಕೆ ನೂರರಷ್ಟು ಗೆಲ್ಲಲಿದೆ. ಎಲ್ಲರ ಪರಿಶ್ರಮ, ಮೋದಿಯವರ ಅಲೆ ನಮ್ಮ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಜ‌ನ‌ ಮನ್ನಣೆ ಕೊಡುತ್ತಾರೆ ಎಂಬ ವಿಶ್ವಾಸ ಇದೆ ಎಂದ್ರು.

ಮುಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂಬ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿ, ಅಂತಹ ಹಗುರವಾದ ಪ್ರಶ್ನೆಗೆ ನಾನು ಉತ್ತರಿಸುವುದಿಲ್ಲ ಎಂದು ಬಿಎಸ್​ವೈ ಕೆಂಡಾಮಂಡಲರಾದರು.

ಹೊನ್ನಾಳಿ ಶಾಸಕ ರೇಣುಕಾಚಾರ್ಯ ಒಂದು ಅಪರೂಪದ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಕೊರೊನಾ ವಾರಿಯರ್ಸ್ ಸನ್ಮಾನಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ರಾಜ್ಯಾದ್ಯಂತ ಕೊರೊನೊ ವಾರಿಯರ್ಸ್​​ಗೆ ಸನ್ಮಾನಿಸುವ ಕಾರ್ಯಕ್ರಮಗಳು ಆಯೋಜನೆಯಾಗಬೇಕು ಎಂದು ಇದೇ ವೇಳೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.