ETV Bharat / state

ಹೆತ್ತ ಮಕ್ಕಳ ಮುಂದೇಯೇ ನೇಣಿಗೆ ಶರಣಾದರಾ ತಾಯಿ? : ಕೊಲೆ ಎಂದು ದೂರು ನೀಡಿದ ಕುಟುಂಬಸ್ಥರು

author img

By

Published : Jul 12, 2022, 7:57 PM IST

Updated : Jul 12, 2022, 8:31 PM IST

ತಾಯಿ ತನ್ನ ಮಕ್ಕಳ ಮುಂದೇಯೇ ನೇಣು ಬಿಗಿದುಕೊಂಡಿದ್ದಾರಾ ಎನ್ನುವ ಪ್ರಶ್ನೆ ಮೂಡಿದೆ. ಇದರ ನಡುವೆಯೇ ಇವರ ಪೋಷಕರು ಕೊಲೆ ಶಂಕೆ ಹಿನ್ನೆಲೆ ದೂರು ನೀಡಿದ್ದಾರೆ.

ಹೆತ್ತ ಮಕ್ಕಳ ಮುಂದೇಯೇ ನೇಣಿಗೆ ಶರಣಾದಳಾ ತಾಯಿ
ಹೆತ್ತ ಮಕ್ಕಳ ಮುಂದೇಯೇ ನೇಣಿಗೆ ಶರಣಾದಳಾ ತಾಯಿ

ದಾವಣಗೆರೆ: ಹರಿಹರ ತಾಲೂಕಿನ ಲಕ್ಕಶೆಟ್ಟಿಹಳ್ಳಿ ಗ್ರಾಮದಲ್ಲಿ ದುರಂತ ಘಟನೆಯೊಂದು ಜರುಗಿದೆ. ತಾಯಿ ತನ್ನ ಮಕ್ಕಳ ಮುಂದೇಯೇ ನೇಣು ಬಿಗಿದುಕೊಂಡಿದ್ದಾರಾ ಎನ್ನುವ ಪ್ರಶ್ನೆ ಮೂಡಿದೆ. ಆದರೆ, ಇದು ಅತ್ಮಹತ್ಯೆಯಲ್ಲ ಕೊಲೆ ಎಂದು ಪೋಷಕರು ಆರೋಪ ಮಾಡಿ ಮಲೇಬೆನ್ನೂರು ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಜಿಲ್ಲೆಯ ಹೊನ್ನಾಳಿ ತಾಲೂಕಿನ ರಾಮೇಶ್ವರ ಗ್ರಾಮದ ಲತಾ ಅವರನ್ನು ಕಳೆದ 8 ವರ್ಷಗಳ ಹಿಂದೆ ಸರ್ಕಾರಿ ಆಸ್ಪತ್ರೆಯಲ್ಲಿ ಎಫ್​​ಡಿಎ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಲ್ಲೇಶ ಎನ್ನುವರ ಜೊತೆ ವಿವಾಹ ಮಾಡಿಕೊಡಲಾಗಿತ್ತು. ಗಂಡ- ಹೆಂಡತಿ ಖುಷಿಯಾಗಿ ಒಬ್ಬರನೊಬ್ಬರು ಪ್ರೀತಿಸುತ್ತಾ ಜೀವನ ಕಳೆಯುತ್ತಿದ್ದರು. ಇದರ ನಡುವೆ ದಂಪತಿಗೆ ಇಬ್ಬರು ಮಕ್ಕಳು ಸಹ ಆಗಿವೆ.

ಹೆತ್ತ ಮಕ್ಕಳ ಮುಂದೇಯೇ ನೇಣಿಗೆ ಶರಣಾದರಾ ತಾಯಿ? : ಕೊಲೆ ಎಂದು ದೂರು ನೀಡಿದ ಕುಟುಂಬಸ್ಥರು

ಇದರ ನಡುವೆ ಕಳೆದ ದಿನ ಲತಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದರಿಂದ ಲತಾ ಕುಟುಂಬಸ್ಥರು ಗಂಡನ ಮನೆಯವರೇ ಹೊಡೆದು ಸಾಯಿಸಿ ನೇಣು ಹಾಕಿದ್ದಾರೆ ಎಂದು ಗಂಭೀರ ಆರೋಪ ಮಾಡುತ್ತಿದ್ದಾರೆ.

ನೇಣು ಹಾಕಿಕೊಂಡರೆ ಪೊಲೀಸರು ಮಹಜರು ಮಾಡಬೇಕು, ಅದನ್ನು ಬಿಟ್ಟು ಮಲ್ಲೇಶ್ ಕೆಲಸ ಮಾಡುತ್ತಿದ್ದ ಹರಿಹರ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದಾರೆ ಎಂದು ಮೃತ ಲತಾ ಸಹೋದರ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಹಾನಿ: ಸಿಎಂ ಭೇಟಿ

Last Updated : Jul 12, 2022, 8:31 PM IST

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.