ETV Bharat / state

ಧಾರವಾಡ: ಅಂಗಡಿ ವಿಚಾರವಾಗಿ ಇಬ್ಬರ ನಡುವೆ ಜಗಳ.. ಗನ್ ತೋರಿಸಿ ಬೆದರಿಕೆ ಹಾಕಿದ ಬಿಜೆಪಿ ಮುಖಂಡ!

author img

By

Published : Feb 2, 2022, 9:07 PM IST

Updated : Feb 2, 2022, 9:27 PM IST

ಅಂಗಡಿ ಇಡುವ ವಿಚಾರಕ್ಕೆ ನಾಗಪ್ಪ ಗಾಣಿಗೇರ ಎಂಬಾತ ಮಡಿವಾಳೆಪ್ಪ ಬೆಳವಲದ ಎಂಬಾತನಿಗೆ ಪಿಸ್ತೂಲ್ ತೋರಿಸಿ ಧಮ್ಕಿ ಹಾಕಿದ್ದಾರೆ.

ಅಂಗಡಿ ವಿಚಾರವಾಗಿ ಇಬ್ಬರ ನಡುವೆ ಜಗಳ
ಅಂಗಡಿ ವಿಚಾರವಾಗಿ ಇಬ್ಬರ ನಡುವೆ ಜಗಳ

ಧಾರವಾಡ: ಅಂಗಡಿ ಇಡುವ ವಿಚಾರವಾಗಿ ಇಬ್ಬರ ನಡುವೆ ನಡೆದ ಜಗಳದಲ್ಲಿ ಬಿಜೆಪಿ ಮುಖಂಡ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ ಘಟನೆ ತಾಲೂಕಿನ ಹೊಸ ತೇಗೂರ ಗ್ರಾಮದಲ್ಲಿ ನಡೆದಿದೆ.

ನಾಗಪ್ಪ ಗಾಣಿಗೇರ ಎಂಬಾತ ಮಡಿವಾಳೆಪ್ಪ ಬೆಳವಲದ ಎಂಬಾತನಿಗೆ ಪಿಸ್ತೂಲ್ ತೋರಿಸಿ ಧಮ್ಕಿ ಹಾಕಿದ್ದಾರೆ. ಈ ಕುರಿತು ಗರಗ ಠಾಣೆಗೆ‌ ಮಡಿವಾಳೆಪ್ಪ ದೂರು ನೀಡಿದ್ದಾರೆ. ಜೀವ ಬೆದರಿಕೆ ಹಾಕಿದ್ದಲ್ಲದೇ ಪಿಸ್ತೂಲ್​​ನಿಂದ ಹೊಡೆಯಲು ಯತ್ನಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

BJP ಮುಖಂಡಗನ್ ತೋರಿಸಿ ಬೆದರಿಕೆ ಹಾಕಿದ

ಎಗ್ ರೈಸ್ ಅಂಗಡಿ ಇಡುವ ಸಂಬಂಧ ನಾಗಪ್ಪ ಮತ್ತು ಮಲಿಕ್ ಎಂಬುವರ ನಡುವೆ ಈ ಜಗಳ ನಡೆದಿತ್ತು. ಈ ಜಗಳ ಬಿಡಿಸಲು ಮಡಿವಾಳಪ್ಪ ಮಧ್ಯೆ ಪ್ರವೇಶಿಸಿದ್ದರು. ಇದರಿಂದ ಕುಪಿತನಾದ ನಾಗಪ್ಪ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ್ದಾನೆ ಎನ್ನಲಾಗ್ತಿದೆ.

ಘಟನೆ ಸಂಬಂಧ ಗರಗ‌ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated :Feb 2, 2022, 9:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.