ETV Bharat / state

ಅಂಗನವಾಡಿ ಕಾರ್ಯಕರ್ತೆಯರ ಬಸ್ ಅಪಘಾತ ಹಿನ್ನೆಲೆ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಹಾಲಪ್ಪ

author img

By

Published : Dec 22, 2022, 12:44 PM IST

Updated : Dec 22, 2022, 12:58 PM IST

dharawad bus accident
ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್​​ ಭೇಟಿ

ಗಾಯಾಳುಗಳು ಜಿಲ್ಲಾಸ್ಪತ್ರೆಗೆ ದಾಖಲು: ಗಾಯಾಳುಗಳಿಗೆ ಸಹಾಯ ಮತ್ತು ಸಹಕಾರವನ್ನು ನಮ್ಮ ಇಲಾಖೆಯಿಂದ ನೀಡುವುದಾಗಿ ಸಚಿವರು ಭರವಸೆ ಇತ್ತರು.

ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್​​ ಭೇಟಿ

ಧಾರವಾಡ: ಅಂಗನವಾಡಿ ಕಾರ್ಯಕರ್ತೆಯರ ಬಸ್​ ಅಪಘಾತ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್​​ ಭೇಟಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿಗೆ ಭೇಟಿ ನೀಡಿದ ಸಚಿವರು ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅಲ್ಲದೇ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ಅಪಘಾತ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಗಾಯಾಳುಗಳಿಗೆ ಸಹಾಯ ಮತ್ತು ಸಹಕಾರವನ್ನು ನಮ್ಮ ಇಲಾಖೆಯಿಂದ ನೀಡುವುದಾಗಿ ಭರವಸೆ ನೀಡಿದರು.

ಬೆಳಗಾವಿಗೆ ಹೊರಟಿದ್ದ ನಾವು ಬಸ್​ನಲ್ಲಿ ನಿದ್ರಿಸುತ್ತಿದ್ದೆವು. ಈ ವೇಳೆ ಎದುರಿನಿಂದ ಬಂದ ಲಾರಿಯೊಂದು ನಮ್ಮ ಬಸ್​ಗೆ ಡಿಕ್ಕಿ ಹೊಡೆಯಿತು. ಲಾರಿ ಚಾಲಕ ಮದ್ಯಪಾನ ಮಾಡಿದ್ದರಿಂದಾಗಿ ಈ ಘಟನೆ ಸಂಭವಿಸಿತು. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ಬಸ್ಸಿನಲ್ಲಿದ್ದ ಸೌಭಾಗ್ಯ ತಿಳಿಸಿದರು.

ಏನಾಗಿತ್ತು?: ವಿವಿಧ ಬೇಡಿಕೆ ಈಡೇರಿಸಬೇಕೆಂದು ಕೋರಿ ಬಳ್ಳಾರಿಯಿಂದ ಅಂಗನವಾಡಿ ಕಾರ್ಯಕರ್ತೆಯರು ಬಸ್ ಮೂಲಕ ಬೆಳಗಾವಿ ಸುವರ್ಣಸೌಧದ ಮುಂದೆ ಪ್ರತಿಭಟನೆ ನಡೆಸಲು ಹೊರಟಿದ್ದರು. ಈ ವೇಳೆ, ಜಿಲ್ಲೆಯ ತೇಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್​​​ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ 12 ಮಂದಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ:ಬೆಳಗಾವಿಗೆ ಪ್ರತಿಭಟಿಸಲು ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರ ಬಸ್​ ಅಪಘಾತ: 7 ಮಂದಿ ಸ್ಥಿತಿ ಗಂಭೀರ

Last Updated :Dec 22, 2022, 12:58 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.