ETV Bharat / state

ರಾತ್ರೋರಾತ್ರಿ‌ ಡಬಲ್‌ ಮರ್ಡರ್: ಬೆಚ್ಚಿಬಿದ್ದ ಹುಬ್ಬಳ್ಳಿ ಜನತೆ

author img

By

Published : Aug 27, 2020, 9:20 AM IST

Hubli
ರಾತ್ರೋರಾತ್ರಿ‌ ಡಬಲ್‌ ಮರ್ಡರ್: ಬೆಚ್ಚಿಬಿದ್ದ ಹುಬ್ಬಳ್ಳಿ ಜನತೆ

ಇಬ್ಬರು ಯುವಕರನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದ ಗೋಪನಕೊಪ್ಪ ಬಸ್ ಸ್ಟಾಪ್​​‌ನಲ್ಲಿ ನಡೆದಿದೆ.

ಹುಬ್ಬಳ್ಳಿ: ನಗರದಲ್ಲಿ ಮಧ್ಯರಾತ್ರಿ ನೆತ್ತರು ಹರಿದಿದೆ. ಡಬಲ್ ಮರ್ಡರ್​​ಗೆ ಹುಬ್ಬಳ್ಳಿಯ ಜನರು ಬೆಚ್ಚಿ ಬಿದ್ದಿದ್ದಾರೆ.

ಇಬ್ಬರು ಯುವಕರನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದ ಗೋಪನಕೊಪ್ಪ ಬಸ್ ಸ್ಟಾಪ್​​​‌ನಲ್ಲಿ ನಡೆದಿದೆ.‌ ಕೊಲೆಯಾದ ಯುವಕರನ್ನು ಮಂಜುನಾಥ ಕಬ್ಬಿನ್ ಹಾಗೂ ನಿಯಾಜ್ ಎಂದು ಗುರುತಿಸಲಾಗಿದೆ. ಅಪರಿಚಿತ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, ಹಳೇ ವೈಷಮ್ಯವೇ ಘಟನೆಗೆ ಕಾರಣ ಎನ್ನಲಾಗಿದೆ.

ಈ ಸಂಬಂಧ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ‌ ‌ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.