ETV Bharat / state

ಬಿಜೆಪಿಗೆ ಒಂದೇ ಮನೆ: ಯಡಿಯೂರಪ್ಪ ಪ್ರಶ್ನಾತೀತ ನಾಯಕ- ಸಚಿವ ಸುಧಾಕರ್

author img

By

Published : Dec 14, 2022, 9:08 PM IST

ಆರೋಗ್ಯ ಸಚಿವ ಡಾ ಕೆ ಸುಧಾಕರ್
ಆರೋಗ್ಯ ಸಚಿವ ಡಾ ಕೆ ಸುಧಾಕರ್

ಕಾಂಗ್ರೆಸ್ ಎರಡು ಸ್ಟೇರಿಂಗ್ ಇರುವ ಬಸ್. ಅವರಿಗೆ ಯಾವ ನೈತಿಕತೆ ಇದೆ ನಮ್ಮ ಬಗ್ಗೆ ಮಾತಾಡೋಕೆ? ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.

ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿಕೆ

ಹುಬ್ಬಳ್ಳಿ: ಬಿಜೆಪಿಗೆ ಒಂದೇ ಮನೆ. ಬಿ ಎಸ್​ ಯಡಿಯೂರಪ್ಪ ಪ್ರಶ್ನಾತೀತ ನಾಯಕ. ಇದನ್ನು ಸಹಿಸದೆ ವಿರೋಧ ಪಕ್ಷದವರು ಮಾತಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಕಾಂಗ್ರೆಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು.

ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ಎರಡು ಸ್ಟೇರಿಂಗ್ ಇರುವ ಬಸ್. ಅವರಿಗೆ ಯಾವ ನೈತಿಕತೆ ಇದೆ ನಮ್ಮ ಬಗ್ಗೆ ಮಾತಾಡೋಕೆ?. ಯಡಿಯೂರಪ್ಪ ರಾಜೀನಾಮೆ ಕೊಟ್ಟ ಬಳಿಕ ಬೊಮ್ಮಾಯಿ ಹಾಲು ಜೇನು ಬೆರತಂತೆ ಕೆಲಸ ಮಾಡ್ತಿದ್ದಾರೆ. ಇದನ್ನು ಅವರಿಗೆ ಸಹಿಸೋಕೆ ಆಗ್ತಿಲ್ಲ.
ಕಾಂಗ್ರೆಸ್​ನಲ್ಲಿ ದೆಹಲಿ ಬಾಗಿಲು, ರಾಮನಗರ ಬಾಗಿಲು, ಮೈಸೂರು ಬಾಗಿಲು ಇದೆ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ, ಸಂದೇಹವೇ ಬೇಡ: ಸಚಿವ ಸುಧಾಕರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.