ETV Bharat / state

ಐದನೇ ದಿನಕ್ಕೆ ಕಾಲಿಟ್ಟ ರೈತರ ಉಪವಾಸ ಸತ್ಯಾಗ್ರಹ, ಕೆಲವರು ಅಸ್ವಸ್ಥ

author img

By

Published : Jan 31, 2020, 12:57 PM IST

ಧಾರವಾಡದಲ್ಲಿ ರೈತರ ಹೋರಾಟ , Farmers Fight for the support price at Dharwad
ಧಾರವಾಡದಲ್ಲಿ ರೈತರ ಹೋರಾಟ

ಜಿಲ್ಲಾಧಿಕಾರಿ ಕಚೇರಿ ಎದುರು ರೈತ ಸಂಘಟನೆ ಪ್ರತಿಭಟನೆ ನಡೆಸುತ್ತಿದ್ದು, ಕೆಲ ರೈತರು ಅಸ್ವಸ್ಥಗೊಂಡ ಹಿನ್ನೆಲೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಧಾರವಾಡ: ರೈತರು ಬೆಳೆದ ಎಲ್ಲ ಬೆಳೆಗಳಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಇಂದು ಐದನೇ ದಿನಕ್ಕೆ ಕಾಲಿಟ್ಟಿದೆ.

ಜಿಲ್ಲಾಧಿಕಾರಿ ಕಚೇರಿ ಎದುರು ರೈತ ಸಂಘಟನೆಯ ಬಸವರಾಜ ಲಕ್ಕಣ್ಣವರ, ರವಿ ಗೌಡ ಪಾಟೀಲ, ಮಹೇಶ ನಾವಳ್ಳಿ, ಮಂಜುನಾಥ ನಾಗಾಂವಿ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ಮಾಡಲಾಗುತ್ತಿದೆ. ಈ ವೇಳೆ ಸ್ಥಳಕ್ಕೆ ಬಂದ ಆರೋಗ್ಯಾಧಿಕಾರಿಗಳು ಉಪವಾಸ ಸತ್ಯಾಗ್ರಹ ಮಾಡುತ್ತಿರುವ ರೈತರ ಆರೋಗ್ಯ ತಪಾಸಣೆ ಮಾಡಿದರು.

ಧಾರವಾಡದಲ್ಲಿ ರೈತರ ಹೋರಾಟ

ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಹಾಗೂ ಕಡಲೆ, ಕುಸುಬಿ, ಸೂರ್ಯಕಾಂತಿ, ಗೋಧಿಯ ಖರೀದಿ ಕೇಂದ್ರಕ್ಕೆ ಆಗ್ರಹಿಸಿ ಹೋರಾಟ ನಡೆಸಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.