ಧಾರವಾಡ: ರೈತರು ಬೆಳೆದ ಎಲ್ಲ ಬೆಳೆಗಳಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಇಂದು ಐದನೇ ದಿನಕ್ಕೆ ಕಾಲಿಟ್ಟಿದೆ.
ಜಿಲ್ಲಾಧಿಕಾರಿ ಕಚೇರಿ ಎದುರು ರೈತ ಸಂಘಟನೆಯ ಬಸವರಾಜ ಲಕ್ಕಣ್ಣವರ, ರವಿ ಗೌಡ ಪಾಟೀಲ, ಮಹೇಶ ನಾವಳ್ಳಿ, ಮಂಜುನಾಥ ನಾಗಾಂವಿ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ಮಾಡಲಾಗುತ್ತಿದೆ. ಈ ವೇಳೆ ಸ್ಥಳಕ್ಕೆ ಬಂದ ಆರೋಗ್ಯಾಧಿಕಾರಿಗಳು ಉಪವಾಸ ಸತ್ಯಾಗ್ರಹ ಮಾಡುತ್ತಿರುವ ರೈತರ ಆರೋಗ್ಯ ತಪಾಸಣೆ ಮಾಡಿದರು.
ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಹಾಗೂ ಕಡಲೆ, ಕುಸುಬಿ, ಸೂರ್ಯಕಾಂತಿ, ಗೋಧಿಯ ಖರೀದಿ ಕೇಂದ್ರಕ್ಕೆ ಆಗ್ರಹಿಸಿ ಹೋರಾಟ ನಡೆಸಲಾಗುತ್ತಿದೆ.