ETV Bharat / state

'ರಾಜ್ಯದಲ್ಲಿ ರಾಜಕೀಯ ಬಾಂಬ್ ಬ್ಲಾಸ್ಟ್ ಆಗುತ್ತೆ, ಕಾದು ನೋಡಿ': ಜಮೀರ್​ ಅಹ್ಮದ್​ ಖಾನ್

author img

By

Published : Oct 21, 2022, 10:44 PM IST

ಮಾಜಿ ಸಚಿವ ಜಮೀರ್​ ಅಹ್ಮದ್​ ಖಾನ್
ಮಾಜಿ ಸಚಿವ ಜಮೀರ್​ ಅಹ್ಮದ್​ ಖಾನ್

ರಾಹುಲ್ ಗಾಂಧಿ ಪಾದಯಾತ್ರೆ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ. ದೇವರ ಆಶೀರ್ವಾದದಿಂದ ಪಾದಯಾತ್ರೆ ಯಶಸ್ವಿಯಾಗಿ ಸಾಗುತ್ತಿದೆ ಎಂದು ಮಾಜಿ ಸಚಿವ ಜಮೀರ್​ ಅಹ್ಮದ್​ ಖಾನ್ ಹೇಳಿದ್ದಾರೆ.

ಧಾರವಾಡ: ಡಿಸೆಂಬರ್​ವರೆಗೂ ರಾಜ್ಯ ರಾಜಕೀಯದಲ್ಲಿ ಬಾಂಬ್ ಬ್ಲಾಸ್ಟ್ ಆಗುತ್ತೆ. ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗ್ತಾರೆ, ಕಾದು ನೋಡಿ ಎಂದು ಮಾಜಿ ಸಚಿವ ಜಮೀರ್​ ಅಹ್ಮದ್​ ಖಾನ್ ಹೇಳಿದ್ದಾರೆ.

ಕುಮಾರಸ್ವಾಮಿ ಅವರಿಗೆ ನನ್ನ ಅರ್ಹತೆ ಗೊತ್ತಿರಲಿಲ್ವಾ?. ರಾಜ್ಯದಲ್ಲಿ 123 ಸ್ಥಾನ ಗೆಲ್ಲುತ್ತೇನೆ ಎನ್ನುವ ಅವರು ಮೊದಲು 59 ಸೀಟು ಗೆದ್ದು ತೋರಿಸಲಿ. ಜಮೀರ್​ ಅಹ್ಮದ್​ ಖಾನ್​ ಅವರನ್ನು ಯಾರೂ ಕಟ್ಟಿ ಹಾಕಲು ಸಾಧ್ಯವಿಲ್ಲ ಎಂದರು.

ಮಾಜಿ ಸಚಿವ ಜಮೀರ್​ ಅಹ್ಮದ್​ ಖಾನ್ ಅವರು ಮಾತನಾಡಿದರು

ರಾಹುಲ್ ಗಾಂಧಿ ಅವರು ಇತಿಹಾಸ ಕ್ರಿಯೇಟ್​ ಮಾಡ್ತಿದ್ದಾರೆ. ಪಾದಯಾತ್ರೆ ಮೂಲಕ ಇಷ್ಟೊಂದು ಜನ ಬರ್ತಾರೆ ಅಂತ ನಾವು ಅಂದುಕೊಂಡಿರಲಿಲ್ಲ. ಪಾಂಡವಪುರದಿಂದ ಶ್ರೀರಂಗಪಟ್ಟಣದವರೆಗೂ ನಡೆದ ನನಗೆ ಅಲ್ಲಿಯವರೆಗೂ ನಡೆಯೋಕೆ ಆಗಿಲ್ಲ. ಅಂಥದ್ದರಲ್ಲಿ ರಾಹುಲ್ ಗಾಂಧಿ ಇಷ್ಟೊಂದು ನಡೀತಿರೋದು ನಿಜಕ್ಕೂ ಅಚ್ಚರಿ. ಮುಸ್ಲಿಮರಿಗೆ ಕಾಂಗ್ರೆಸ್​ನಲ್ಲಿ ಟಿಕೆಟ್ ನೀಡುತ್ತಾರೆ. ಆದ್ರೆ ಅವರನ್ನು ಜನರು ಗೆಲ್ಲಿಸುತ್ತಿಲ್ಲ. ಅವರು ಗೆಲ್ಲಿಸಿದ್ರೆ ಒಳ್ಳೆದು ಎಂದು ಹೇಳಿದರು. ಇದೇ ವೇಳೆ, ಖರ್ಗೆ ಎಐಸಿಸಿ ಅಧ್ಯಕ್ಷರಾಗಿರೋದು ನಮಗೆ ಆನೆಬಲ ಬಂದಂತಾಗಿದೆ ಎಂದರು.

ಇದನ್ನೂ ಓದಿ: ಶಾಸಕ ಜಮೀರ್ ಅವರ ಸ್ವಾತಂತ್ರ್ಯ ಅಮೃತ ಮಹೋತ್ಸವ ನಡಿಗೆ ಮುಕ್ತಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.