ETV Bharat / state

ಹುಬ್ಬಳ್ಳಿ ಗಲಭೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಧಾರವಾಡ ಹೈಕೋರ್ಟ್

author img

By

Published : Jun 30, 2022, 3:34 PM IST

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಇಂದು ನಡೆದಿದ್ದು, ಧಾರವಾಡ ಹೈಕೋರ್ಟ್​ ಪೀಠ ಅರ್ಜಿಯನ್ನು ತಿರಸ್ಕರಿಸಿದೆ.

Dharwad High Court
ಧಾರವಾಡ ಹೈಕೋರ್ಟ್

ಧಾರವಾಡ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ತಿರಸ್ಕರಿಸಿದೆ. ಏಪ್ರಿಲ್​ 16ರಂದು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ಭಾರಿ ಗಲಾಟೆ, ಕಲ್ಲು ತೂರಾಟ ನಡೆದಿತ್ತು.

ಪೊಲೀಸ್ ವಾಹನ ಹಾಗೂ ಪೊಲೀಸರ ಮೇಲೆ ನಡೆದಿದ್ದ ಕಲ್ಲು ತೂರಾಟ ಪ್ರಕರಣದಲ್ಲಿ 156 ಜನರನ್ನು ಬಂಧಿಸಲಾಗಿತ್ತು. ಬಂಧಿತರ ಪೈಕಿ ಈಗಾಗಲೇ 8 ಜನ ಜಾಮೀನು ಪಡೆದಿದ್ದಾರೆ. ಇವತ್ತು ಉಳಿದವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಅವರ ಜಾಮೀನು ಅರ್ಜಿಯನ್ನು ಕೋರ್ಟ್​ ತಿರಸ್ಕರಿಸಿದೆ.

ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಪ್ರಕರಣ: ಏಳು ಮಂದಿಗೆ ಷರತ್ತು ಬದ್ಧ ಜಾಮೀನು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.