ETV Bharat / state

ಹುಬ್ಬಳ್ಳಿ: ಕೆಲಸಕ್ಕೆ ಹೋಗೆಂದ ಪತ್ನಿ ಕೊಂದು, ಪತಿ ಆತ್ಮಹತ್ಯೆ

author img

By ETV Bharat Karnataka Team

Published : Dec 8, 2023, 7:09 PM IST

Updated : Dec 9, 2023, 12:40 PM IST

ಹುಬ್ಬಳ್ಳಿ: ಕೆಲಸಕ್ಕೆ ಹೋಗೆಂದ ಪತ್ನಿ ಕೊಂದು, ಪತಿ ಆತ್ಮಹತ್ಯೆ
ಹುಬ್ಬಳ್ಳಿ: ಕೆಲಸಕ್ಕೆ ಹೋಗೆಂದ ಪತ್ನಿ ಕೊಂದು, ಪತಿ ಆತ್ಮಹತ್ಯೆ

ಹಳೆ ಹುಬ್ಬಳ್ಳಿಯ ಕಟಕರ ಒಣಿಯಲ್ಲಿ ಪತ್ನಿಯನ್ನು ಕೊಂದು ನಂತರ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಮುಸ್ಲಿಂ ಸಮಾಜದ ಮುಖಂಡ‌ ಅಜ್ಜುಖಾನ್‌ ಅವರು ಮಾತನಾಡಿದರು

ಹುಬ್ಬಳ್ಳಿ: ಕೆಲಸಕ್ಕೆ‌ ಹೋಗೆಂದ ಪತ್ನಿಯನ್ನೇ ಬರ್ಬರವಾಗಿ ಕೊಲೆಗೈದ ಪತಿ ಬಳಿಕ ತಾನೂ ಆತ್ಮಹತ್ಯೆ‌ ಮಾಡಿಕೊಂಡ ಘಟನೆ ಹಳೆ ಹುಬ್ಬಳ್ಳಿಯ ಕಟಕರ ಓಣಿಯಲ್ಲಿ‌ ನಡೆದಿದೆ. ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯ ಹೆಸರು ಮಲೀಕ್ ಬೇಪಾರಿ. ಪತ್ನಿ ಶಾಹಿಸ್ತಾಬಾನುಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಆರೋಪಿ, ನಂತರ ಅದೇ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಲೀಕ್​ ಬೇರೆ ಯಾವುದೇ ಕೆಲಸ ಮಾಡುತ್ತಿರಲಿಲ್ಲ. ಮನೆ ನಡೆಸಲು ದುಡಿಮೆ ಮಾಡು ಎಂದು ಒತ್ತಾಯಿಸಿದ್ದೇ ಪತ್ನಿಯ ಕೊಲೆಗೆ ಕಾರಣವಂತೆ‌. ಏನಾದರು ದುಡಿದು ತಾ ಎಂದು ಪತ್ನಿ ಒತ್ತಾಯಿಸುತ್ತಿದ್ದರಂತೆ. ಇದೇ ಕಾರಣಕ್ಕಾಗಿ ಗಂಡ-ಹೆಂಡತಿ ನಡುವೆ ಪ್ರತಿನಿತ್ಯ ಜಗಳ ನಡೆಯುತ್ತಿತ್ತು. ಇಂದು ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ದೊರೆತಿದೆ.

ಶಾಹಿಸ್ತಾಬಾನು ಅವರ ಮೊದಲ ಗಂಡ ತೀರಿಕೊಂಡಿದ್ದ‌ರು. ಮೊದಲ ಪತಿಯಿಂದ ಮಹಿಳೆಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಬಳಿಕ ಮಲ್ಲೀಕ್​ ಜತೆ ಶಾಹಿಸ್ತಾಬಾನು ಜೊತೆ ಮದುವೆ ಮಾಡಿಸಿದ್ದರು. ಮದುವೆಯಾಗಿ ಒಂದು ವರ್ಷವಾದರೂ ಗಂಡ ದುಡಿಯಲು ಹೋಗುತ್ತಿಲ್ಲ ಎಂದು ಶಾಹಿಸ್ತಾಬಾನು ಬೇಸತ್ತಿದ್ದರು ಎಂದು ತಿಳಿದು ಬಂದಿದೆ.

ಪತ್ನಿಯ ಶವದ ಪಕ್ಕದಲ್ಲೇ ಪತಿ ಆತ್ಮಹತ್ಯೆ: ಪತ್ನಿಯನ್ನೂ ಕೆಲಸಕ್ಕೆ ಕಳುಹಿಸದೆ ಮಲೀಕ್ ಮನೆಯಲ್ಲೇ ಇರಿಸಿಕೊಂಡಿದ್ದ‌. ಹೀಗಾದರೆ ಮನೆ ನಡೆಯುವುದು ಹೇಗೆ ಅಂತಾ ಶಾಹಿಸ್ತಾಬಾನು ಚಿಂತೆಗೀಡಾಗಿದ್ದರು. ನೀನಾದರೂ ಕೆಲಸ ಮಾಡು ಎಂದು ಪ್ರತಿನಿತ್ಯ ಮಲೀಕ್‌ನನ್ನು ಒತ್ತಾಯ ಮಾಡುತ್ತಿದ್ದರು. ಇದು ಮಲೀಕ್‌ಗೆ ಕಿರಿಕಿರಿ ಅನ್ನಿಸಿ ಪತ್ನಿಯ ಜೊತೆ ವಾಗ್ವಾದ ಶುರು ಮಾಡಿದ್ದನಂತೆ. ಇಂದು ಏಕಾಏಕಿ ಮನೆಯ ಮೇಲಿನ ಕೊಠಡಿಯಲ್ಲಿ ಜಗಳ ತೆಗೆದು ಪತ್ನಿಯ ಎದೆ ಮತ್ತು ಹೊಟ್ಟೆಯ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಶಾಹಿಸ್ತಾಬಾನು ಕೊನೆಯುಸಿರೆಳೆದಿದ್ದಾರೆ. ಗಾಬರಿಯಾದ ಮಲೀಕ್ ಪತ್ನಿಯ ಶವದ ಪಕ್ಕವೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸ್ಥಳಕ್ಕೆ ದೌಡಾಯಿಸಿದ ಕಸಬಾಪೇಟೆ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಕಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಸ್ಥಳೀಯರ ವಿಚಾರಣೆ ನಡೆಸಿದ್ದು, ಕೊಲೆ ಮತ್ತು ಆತ್ಮಹತ್ಯೆಯ ಕುರಿತು ಸಮಗ್ರ ತನಿಖೆ ನಡೆಸುತ್ತಿದ್ದಾರೆ. ತಾಯಿಯನ್ನು ಕಳೆದುಕೊಂಡ ಎರಡು ಪುಟ್ಟ ಮಕ್ಕಳು ಅನಾಥವಾಗಿವೆ.

ಇದನ್ನೂ ಓದಿ: ತಾಯಿ ಮನೆಯಲ್ಲಿದ್ದ ಹೆಂಡತಿ ಕರೆಸಿ ಹತ್ಯೆ; ಗಂಡನೂ ಆತ್ಮಹತ್ಯೆ

Last Updated :Dec 9, 2023, 12:40 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.