ETV Bharat / state

ವಿಚಾರಣೆಗೆ ಹಾಜರಾಗುವಂತೆ ವಿನಯ್ ಕುಲಕರ್ಣಿ ಆಪ್ತನಿಗೆ ಐಟಿ ಇಲಾಖೆ ನೋಟಿಸ್

author img

By

Published : May 6, 2023, 10:12 AM IST

income tax
ಏಗನಗೌಡರ್

ವಿನಯ್​ ಕುಲಕರ್ಣಿ ಆಪ್ತರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದ ಏಗನಗೌಡರ್​ಗೆ ದಾಖಲೆ ಸಮೇತ ಕಚೇರಿ ಬರುವಂತೆ ನೋಟಿಸ್ ನೀಡಲಾಗಿದೆ.

ಧಾರವಾಡ: ಮಾಜಿ ಸಚಿವ ವಿನಯ್​ ಕುಲಕರ್ಣಿಯ‌ ಮತ್ತೊಬ್ಬ ಆಪ್ತನಿಗೆ ಐಟಿ ಇಲಾಖೆ ನೋಟಿಸ್​ ನೀಡಿದೆ. ಇಂದು ಬೆಳಗ್ಗೆ 10 ಗಂಟೆಗೆ ಹುಬ್ಬಳ್ಳಿ ಐಟಿ ಕಚೇರಿಗೆ ಆಗಮಿಸುವಂತೆ ವಿನಯ‌್​ ಪರ ಚುನಾವಣಾ ಪ್ರಚಾರದಲ್ಲಿ ಓಡಾಡುತ್ತಿದ್ದ ಅರವಿಂದ ಏಗನಗೌಡರಿಗೆ ನೋಟಿಸ್ ಜಾರಿಗೊಳಿಸಲಾಗಿದೆ.

income tax
ಆದಾಯ ತೆರಿಗೆ ಇಲಾಖೆ ಕಳೂಹಿಸಿದ ನೋಟಿಸ್​

ದಾಖಲೆ ಸಮೇತ ಕಚೇರಿ ಬರುವಂತೆ ಏಗನಗೌಡರ್​ಗೆ ನೋಟಿಸ್ ನೀಡಿರುವ ಐಟಿ ಅಧಿಕಾರಿಗಳು, ಗುರುವಾರವಷ್ಟೇ ವಿನಯ‌್​ ಕುಲಕರ್ಣಿ ಆಪ್ತ ಸಹಾಯಕ ಪ್ರಶಾಂತ ಕೇಕರೆ ಹಾಗೂ ಈಶ್ವರ ಶಿವಳ್ಳಿ ಮನೆ ಮೇಲೆ ದಾಳಿ ಮಾಡಿದ್ದರು. ಅರವಿಂದ ಧಾರವಾಡ ಗ್ರಾಮೀಣ‌ ಕ್ಷೇತದ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಈ ಹಿಂದೆ ಬಿಜೆಪಿಯಲ್ಲಿದ್ದ ಅವರು ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದರು.

ಇದನ್ನೂ ಓದಿ : ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತನ ನಿವಾಸದ ಮೇಲೆ ಐಟಿ ದಾಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.