ETV Bharat / state

ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತನ ನಿವಾಸದ ಮೇಲೆ ಐಟಿ ದಾಳಿ

author img

By

Published : May 4, 2023, 7:23 PM IST

Updated : May 4, 2023, 7:38 PM IST

Etv Bharat
Etv Bharat

ಮಾಜಿ ಸಚಿವ ವಿನಯ್​ ಕುಲಕರ್ಣಿ ಆಪ್ತ ಪ್ರಶಾಂತ್​ ಕೇಕರೆ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತನ ನಿವಾಸದ ಮೇಲೆ ಐಟಿ ದಾಳಿ

ಧಾರವಾಡ : ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಮಾಜಿ ಸಚಿವ ವಿನಯ ಕುಲಕರ್ಣಿ ಆಪ್ತ ಪ್ರಶಾಂತ್​ ಕೇಕರೆ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಿಲ್ಲೆಯ ಸಪ್ತಾಪುರ ಬಡಾವಣೆಯ ಕೃಷಿ ಪಾರ್ಕ್‌ನಲ್ಲಿರುವ ಕೇಕರೆ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ವಿವಿಧ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಕಳೆದ ಬಾರಿಯ ಚುನಾವಣೆ ಸಂದರ್ಭದಲ್ಲಿಯೂ ಪ್ರಶಾಂತ್​ ಕೇಕರೆ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಚುನಾವಣೆ ಹೊತ್ತಿನಲ್ಲಿ ಮತ್ತೆ ವಿನಯ್​ ಕುಲಕರ್ಣಿಗೆ ಐಟಿ ಅಧಿಕಾರಿಗಳು ಶಾಕ್​ ನೀಡಿದ್ದು, ಈ ಸಂದರ್ಭದಲ್ಲಿ ಇದೆಲ್ಲ ಸಹಜ ಎಂದ ಪ್ರಶಾಂತ್​ ಕೇಕರೆ ಅಧಿಕಾರಿಗಳಿಗೆ ಮನೆ ಕೀ ನೀಡಿ ಮನೆಯ ಒಳಗಡೆ ತೆರಳಿದ್ದಾರೆ.

ಇದನ್ನೂ ಓದಿ : ಶಾಸಕ ಕೃಷ್ಣ ಕಲ್ಯಾಣಿ ನಿವಾಸ, ಕಚೇರಿಗಳ ಮೇಲೆ ಐಟಿ, ಇಡಿ ದಾಳಿ..

Last Updated :May 4, 2023, 7:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.