ETV Bharat / state

ಹುಬ್ಬಳ್ಳಿಯ ಬಿಲ್ಡರ್ಸ್ ಮನೆ, ಕಚೇರಿ ಮೇಲೆ ಐಟಿ ದಾಳಿ: ದಾಖಲೆ ಪರಿಶೀಲನೆ

author img

By

Published : Apr 24, 2023, 10:42 PM IST

ಹುಬ್ಬಳ್ಳಿಗೆ ಐಟಿ ಅಧಿಕಾರಿಗಳು ಲಗ್ಗೆ ಇಟ್ಟಿದ್ದು, ಬಿಲ್ಡರ್ಸ್​ಗಳಿಗೆ ಶಾಕ್ ಕೊಟ್ಟಿದ್ದಾರೆ.

ಹುಬ್ಬಳ್ಳಿಯ ಬಿಲ್ಡರ್ಸ್ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ
ಹುಬ್ಬಳ್ಳಿಯ ಬಿಲ್ಡರ್ಸ್ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ

ಹುಬ್ಬಳ್ಳಿಯ ಬಿಲ್ಡರ್ಸ್ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ

ಹುಬ್ಬಳ್ಳಿ: ರಾಜ್ಯದಲ್ಲಿ ಚುನಾವಣಾ ಕಾವು ಏರುತ್ತಿದೆ. ಇದರ ಮಧ್ಯೆ ಐಟಿ ಅಧಿಕಾರಿಗಳು ಫಿಲ್ಡಿಗೆ ಇಳಿದಿದ್ದಾರೆ. ವಾಣಿಜ್ಯನಗರಿ ಹುಬ್ಬಳ್ಳಿಗೆ ಐಟಿ ಅಧಿಕಾರಿಗಳು ಲಗ್ಗೆ ಇಟ್ಟಿದ್ದು, ಬಿಲ್ಡರ್ಸ್ ಗಳಿಗೆ ಶಾಕ್ ಕೊಟ್ಟಿದ್ದಾರೆ. ಅಂಕಿತಾ ಬಿಲ್ಡರ್ಸ್ ಮನೆ ಹಾಗೂ ಕಚೇರಿ ಮೇಲೆ ಐಟಿ ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯ ನಿಲೀಜನ ರಸ್ತೆಯಲ್ಲಿರುವ ಕಚೇರಿ ಹಾಗೂ ಮಂಜುನಾಥ್ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದು, ಅಂಕಿತಾ ಡೆವಲಪರ್ಸ್​ನ ಮಾಲೀಕ ನಾರಾಯಣ ಬಿ ಆಚಾರ್ಯ ಮನೆ ಮೇಲೆ ಐಟಿ‌ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನೂ ಏಕಕಾಲಕ್ಕೆ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ಮನೆಯಲ್ಲಿ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.

ಮಂಗಳೂರು ಕಾಂಗ್ರೆಸ್ ಮುಖಂಡನ ಮನೆ ಕಚೇರಿ ಮೇಲೆ ಐಟಿ ದಾಳಿ: ಇನ್ನೊಂದೆಡೆ ಕಾಂಗ್ರೆಸ್ ಮುಖಂಡ, ಉದ್ಯಮಿ ವಿವೇಕ್ ರಾಜ್ ಪೂಜಾರಿಯ ಅವರ 2 ಮನೆ ಮತ್ತು ಕಚೇರಿ ಮೇಲೆ ಆದಾಯ ತೆರಿಗೆ (Income Tax) ಇಲಾಖೆ ಅಧಿಕಾರಿಗಳು (ಏಪ್ರಿಲ್ 16-2023) ರಂದು ದಾಳಿ ನಡೆಸಿದ್ದರು. ಶನಿವಾರ ಬೆಳಗ್ಗೆ 7 ಗಂಟೆಗೆ ರಾಜ್ಯದ ಬೇರೆ ಬೇರೆ ಕಡೆಯ 14 ಮಂದಿ ಅಧಿಕಾರಿಗಳು ವಿವೇಕ್ ರಾಜ್ ಪೂಜಾರಿಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ನಡೆಸಿದ್ದರು. ಅತ್ತಾವರ ಮತ್ತು ಮಣ್ಣಗುಡ್ಡೆಯಲ್ಲಿರುವ ಎರಡು ಮನೆಗೆ ಹಾಗೂ ವಿವೇಕನಗರದಲ್ಲಿರುವ ಕಚೇರಿಗೆ ಏಕಕಾಲಕ್ಕೆ ದಾಳಿ ನಡೆಸಿದ್ದರು.

ಇದನ್ನೂ ಓದಿ: ಐಟಿ ದಾಳಿ ಅಂತ್ಯ: ಕೆಜಿಎಫ್ ಬಾಬು ವಿರುದ್ಧ ದೂರು ದಾಖಲಿಸಿದ ಚುನಾವಣಾ ಅಧಿಕಾರಿಗಳು

ವಿವೇಕ್ ರಾಜ್ ಪೂಜಾರಿ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ ಸ್ಪರ್ಧಿಸುವ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಉಸ್ತುವಾರಿಯ ಜವಾಬ್ದಾರಿ ವಹಿಸಿದೆ. ಅದರಂತೆ ಅವರು ಚಿಕ್ಕಮಗಳೂರು ಕ್ಷೇತ್ರದಾದ್ಯಂತ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಚೆಕ್‌ಪೋಸ್ಟ್‌ ಬಳಿಯೇ ಕೆಟ್ಟು ನಿಂತ ಆಟೋದಲ್ಲಿತ್ತು 1 ಕೋಟಿ‌ ರೂಪಾಯಿ: ಬೆಂಗಳೂರಿನಲ್ಲಿ ಇಬ್ಬರು ವಶಕ್ಕೆ

ಐಟಿ ಕಾರ್ಯಾಚರಣೆ: ರಾಜ್ಯದಲ್ಲಿ ಐಟಿ ಇಲಾಖೆ ಇತ್ತೀಚೆಗೆ ಭರ್ಜರಿ ಕಾರ್ಯಾಚರಣೆ ನಡೆಸಿತ್ತು. ರಾಜ್ಯದ ವಿವಿಧ ಕೋ ಆಪರೇಟಿವ್ ಬ್ಯಾಂಕ್​ಗಳು ಚೆಕ್ ಡಿಸ್ಕೌಂಟ್ ಮೂಲಕ ಸುಮಾರು 1,000 ಕೋಟಿ ರೂ. ಅಧಿಕ ಮೊತ್ತವನ್ನು ಸಂಶಯಾಸ್ಪದವಾಗಿ ಪಾವತಿ ಮಾಡಿರುವ ಪ್ರಕರಣವನ್ನು ಐಟಿ ಇಲಾಖೆ ಪತ್ತೆ ಮಾಡಿತ್ತು. ''ಮಾರ್ಚ್ 31 ರಂದು ರಾಜ್ಯದ ಕೆಲ ಕೋ ಆಪರೇಟಿವ್ ಬ್ಯಾಂಕ್​ಗಳಲ್ಲಿ ಶೋಧ ಕಾರ್ಯ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು. ಸುಮಾರು 16 ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿ ಈ ಅಕ್ರಮ ಪಾವತಿಯನ್ನು ಪತ್ತೆ ಹಚ್ಚಲಾಗಿದೆ'' ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ (CBDT) ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿತ್ತು.

ಇದನ್ನೂ ಓದಿ : ಮಂಗಳೂರು: ಕಾಂಗ್ರೆಸ್ ಮುಖಂಡನ ಮನೆ, ಕಚೇರಿ ಮೇಲೆ ಐಟಿ ದಾಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.