ಚಿರತೆ ಕಣ್ಣಾಮುಚ್ಚಾಲೆ:ಅರಣ್ಯ ಇಲಾಖೆ ಚಿಂತೆಗೆ ದೂಡಿದ ಚಿರತೆ

author img

By

Published : Sep 24, 2021, 12:50 PM IST

Updated : Sep 24, 2021, 1:13 PM IST

ಅರಣ್ಯ ಇಲಾಖೆಯನ್ನ ಚಿಂತೆಗೆ ದೂಡಿದ ಚಿರತೆ

ಚಿರತೆ ಗೋವನಕೊಪ್ಪ ಗ್ರಾಮಕ್ಕೆ ಹೋಗಿದೆ ಎನ್ನುವ ಮಾಹಿತಿ ಕೂಡ ಅಧಿಕಾರಿಗಳಿಂದ ಬಂದಿದೆ. ಅಲ್ಲದೇ ಗ್ರಾಮಸ್ಥರ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಕಂದಾಯ ನಿರೀಕ್ಷಕರು ಮತ್ತು ಗ್ರಾಮಲೆಕ್ಕಾಧಿಕಾರಿ ಸ್ಥಳದಲ್ಲಿ ಹಾಜರಿದ್ದು ಮತ್ತೆ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಧಾರವಾಡ: ಕಳೆದ ಮೂರು ದಿನಗಳಿಂದ ತಾಲೂಕಿನ ಕವಲಗೇರಿ ಗ್ರಾಮದಲ್ಲಿ ಚಿರತೆ ಸೆರೆ ಹಿಡಿಯಲು ಹಗಲು ರಾತ್ರಿಯೆನ್ನದೇ ಅರಣ್ಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಚಿರತೆ ಬಲೆಗೆ ಬೀಳದೆ ಕಣ್ಣಾಮುಚ್ಚಾಲೆ ಆಟ ನಡೆಸಿದೆ.

ಚಿರತೆ ಸೆರೆಹಿಡಿಯಲು ಕಾರ್ಯಾಚರಣೆ

ಕಳೆದ ರಾತ್ರಿ ಕವಲಗೇರಿ ಗ್ರಾಮದಲ್ಲಿ‌ ಚಿರತೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು. ಆದರೆ ಚಿರತೆ ಅಲ್ಲಿಂದ ಗೋಪನಕೊಪ್ಪದತ್ತ ಹೋಗಿದೆ. ಚಿರತೆ ಗೋವನಕೊಪ್ಪ ಮಾವಿನ ತೋಟಕ್ಕೆ, ಕಬ್ಬಿನ ಗದ್ದೆಯಲ್ಲಿ ಬಂದಿದೆ ಎನ್ನುವ ಮಾಹಿತಿ ಬೆನ್ನಲ್ಲೇ ಮತ್ತೆ ಅಧಿಕಾರಗಳು ಗೋಪನಕೊಪ್ಪಕ್ಕೆ ತೆರಳಿದ್ದರು.

ಚಿರತೆ ಗೋವನಕೊಪ್ಪ ಗ್ರಾಮಕ್ಕೆ ಹೋಗಿದೆ ಎನ್ನುವ ಮಾಹಿತಿ ಕೂಡ ಅಧಿಕಾರಿಗಳಿಂದ ಬಂದಿದೆ. ಅಲ್ಲದೆ ಗ್ರಾಮಸ್ಥರ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಕಂದಾಯ ನಿರೀಕ್ಷಕರು ಮತ್ತು ಗ್ರಾಮಲೆಕ್ಕಾಧಿಕಾರಿ ಸ್ಥಳದಲ್ಲಿ ಹಾಜರಿದ್ದು, ಮತ್ತೆ ಕಾರ್ಯಾಚರಣೆ ಮುಂದುವರಿಸಿದ್ದಾರೆ.

Last Updated :Sep 24, 2021, 1:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.