ETV Bharat / state

'ಶಾಸಕರಿಗೆ 50 ಕೋಟಿ ಆಫರ್​ ನೀಡುವ ಅಗತ್ಯವಿಲ್ಲ, ಜಗಳದಲ್ಲೇ ಸರ್ಕಾರ ಬೀಳುತ್ತೆ‘: ನಳಿನ್​ ಕುಮಾರ್​ ಕಟೀಲ್​

author img

By ETV Bharat Karnataka Team

Published : Nov 3, 2023, 6:56 PM IST

Nalin Kumar Kateel statement against Congress: ಬಿಜೆಪಿ ಕಾಂಗ್ರೆಸ್​ ಶಾಸಕರಿಗೆ 50 ಕೋಟಿ ಹಣಗಳ ಆಫರ್​ ನೀಡಿದೆ ಎಂಬ ಆರೋಪಕ್ಕೆ ನಳಿನ್​ ಕುಮಾರ್​ ಕಟೀಲ್​ ತಿರುಗೇಟು ನೀಡಿದ್ದಾರೆ.

Nalin kumar kateel
ನಳಿನ್​ ಕುಮಾರ್​ ಕಟೀಲ್​

ನಳಿನ್​ ಕುಮಾರ್​ ಕಟೀಲ್​ ಹೇಳಿಕೆ

ಹುಬ್ಬಳ್ಳಿ: "ಕಾಂಗ್ರೆಸ್​ ಶಾಸಕರಿಗೆ ಐವತ್ತು ಕೋಟಿ ಆಫರ್ ನೀಡುವ ಅವಶ್ಯಕತೆ ಆಗಲಿ, ಅನಿವಾರ್ಯತೆಯಾಗಲಿ ಬಿಜೆಪಿಗೆ ಇಲ್ಲ. ಕಾಂಗ್ರೆಸ್ ಆಂತರಿಕ ಜಗಳದಿಂದಲೇ ಸರ್ಕಾರ ಬಿದ್ದು ಹೋಗುತ್ತದೆ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ವಾಗ್ದಾಳಿ ನಡೆಸಿದರು.

ಬಿಜೆಪಿ ಪ್ರಶಿಕ್ಷಣ ಕಾರ್ಯಾಗಾರಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, 'ಜನರಿಗೆ ದಾರಿ ತಪ್ಪಿಸುವ ಭಾಗವಾಗಿ ಬಿಜೆಪಿ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಸಿದ್ಧರಾಮಯ್ಯ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ 250 ಕ್ಕೂ ಹೆಚ್ಚಿನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯುತ್ ಕ್ಷಾಮ ಹೆಚ್ಚಾಗಿದೆ. ಅಲ್ಲದೇ ನೀರಿನ ಸಮಸ್ಯೆಯಿಂದ ಜನರು ಕಂಗಾಲಾಗಿದ್ದಾರೆ. ಈ ನಿಟ್ಟಿನಲ್ಲಿ ಬರ ಪರಿಶೀಲನೆ ಅಧ್ಯಯನ ತಂಡವನ್ನು ಮಾಡಿ ನಾಳೆಯಿಂದ ಸಮೀಕ್ಷೆ ಮಾಡಲಾಗುತ್ತದೆ ಎಂದರು.

ಮುಂದುವರೆದು ವಿರೋಧಪಕ್ಷದ ನಾಯಕ ವಿಚಾರಕ್ಕೆ ಪ್ರತಿಕ್ರಿಯಿಸಿ, ನಮ್ಮಲ್ಲಿರುವ ಎಲ್ಲ ನಾಯಕರು ಸಮರ್ಥರೇ. ಈ ನಿಟ್ಟಿನಲ್ಲಿ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿ ಸೂಕ್ತ ಸಮಯದಲ್ಲಿ ನಮ್ಮ ವರಿಷ್ಠರು ನಿರ್ಧಾರವನ್ನು ಕೈಗೊಳ್ಳುತ್ತಾರೆ ಎಂದ ಕಟೀಲ್​, ಕೇಂದ್ರ ಸರ್ಕಾರಕ್ಕೆ ತನ್ನದೇ ಆದ ಗೈಡ್ ಲೈನ್ ಇದೆ. ಎನ್.ಡಿ.ಆರ್.ಎಫ್ ಹಾಗೂ ಎಸ್‌.ಡಿ.ಆರ್.ಎಫ್ ವರದಿ ಮೇಲೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಪ್ರಸ್ತಾವನೆ ಪರಿಶೀಲನೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತದೆ. ಖಂಡಿತವಾಗಿಯೂ ಸರ್ಕಾರ ಹಣವನ್ನು ಬಿಡುಗಡೆ ಮಾಡುತ್ತದೆ ಎಂದು ಹೇಳಿದರು.

ಇನ್ನು, ಕಾಂಗ್ರೆಸ್​​ ಪಕ್ಷದಲ್ಲಿ ಆಂತಕರಿಕ ಜಗಳವಿದೆ ಎನ್ನುವ ಹೇಳಿಕೆಗೆ ಹುಬ್ಬಳ್ಳಿಯಲ್ಲಿಂದು ಡಿಕೆಶಿ ಪ್ರತಿಕ್ರಿಯಿಸಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ. ಆದರೆ, ಬಿಜೆಪಿಯಲ್ಲಿ ಅಸಮಾಧಾನ ಇರುವುದರಿಂದಲೇ ಈವರೆಗೆ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡಿಲ್ಲ. ಮೂರ್ನಾಲ್ಕು ದಿನಗಳಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧವಾಗಲಿದೆ. ಈಗಾಗಲೇ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿತ್ತು. ಸಚಿವರು ಶೇ.75 ಕ್ಷೇತ್ರಕ್ಕೆ ಹೋಗಿ ಸ್ಥಳೀಯ ಶಾಸಕರನ್ನು, ಕಾರ್ಯಕರ್ತರುಗಳನ್ನು ಭೇಟಿಯಾಗಿ ಬಂದಿದ್ದಾರೆ. ಅವರೆಲ್ಲರೂ ಈಗಾಗಲೇ ವರದಿ ಸಲ್ಲಿಸಬೇಕಿತ್ತು. ಆದರೆ, ಕಾರಣಾಂತರಗಳಿಂದ ತಡವಾಗಿದೆ ಎಂದು ತಿಳಿಸಿದ್ದರು. ಜತೆಗೆ ಹೊಸ ಮುಖ, ವಾಕ್ಚಾತುರ್ಯ, ಯುವಕರು ಸೇರಿ ಹಲವು ಮಾನದಂಡಗಳನ್ನು ಇಟ್ಟುಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದೇವೆ ಈ ನಿಟ್ಟಿನಲ್ಲಿ ವರದಿ ಸಿದ್ಧವಾಗುತ್ತಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ರಾಜಕೀಯದಲ್ಲಿ ಏನು ಬೇಕಾದ್ರೂ ಆಗಬಹುದು.. ಪರಮೇಶ್ವರ್​ಗೆ ಸಿಎಂ ಆಗೋ ಅದೃಷ್ಟವಿದೆ: ಸಚಿವ ರಾಜಣ್ಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.