ETV Bharat / state

NWKRTC ವಿಶೇಷ ಬಸ್​ಗಳ ವ್ಯವಸ್ಥೆ: ಬೆಳಗಾವಿಯಿಂದ ಒಂದು ದಿನದ ಟೂರ್ ಪ್ಯಾಕೇಜ್; ಶಕ್ತಿ ಯೋಜನೆಗಿಲ್ಲ ಅವಕಾಶ

author img

By

Published : Aug 9, 2023, 10:31 PM IST

ಬೆಳಗಾವಿಯಿಂದ ಒಂದು ದಿನದ ಟೂರ್
ಬೆಳಗಾವಿಯಿಂದ ಒಂದು ದಿನದ ಟೂರ್

ಬೆಳಗಾವಿಯಿಂದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಒಂದು ದಿನದ ಟೂರ್ ಪ್ಯಾಕೇಜ್‌ಗೆ ವಿಶೇಷ ಬಸ್​ಗಳ ವ್ಯವಸ್ಥೆ ಮಾಡಿದೆ.

ಹುಬ್ಬಳ್ಳಿ : ಮಳೆಗಾಲದ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ವಾರಾಂತ್ಯ ಹಾಗೂ ಸಾರ್ವಜನಿಕ ರಜಾ ದಿನಗಳಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಆರಂಭಿಸಲಾದ ಒಂದು ದಿನದ ಟೂರ್ ಪ್ಯಾಕೇಜ್ ವಿಶೇಷ ಬಸ್​ಗಳಿಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಈ ವ್ಯವಸ್ಥೆಯನ್ನು ಬೇರೆ ಸ್ಥಳಗಳಿಗೂ ವಿಸ್ತರಿಸುವಂತೆ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯಿಂದ ಮತ್ತಷ್ಟು ಒಂದು ದಿನದ ಟೂರ್ ಪ್ಯಾಕೇಜ್ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗುತ್ತಿದೆ. ವಿಶೇಷ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ. ಪ್ರತಿ ಭಾನುವಾರ, 2ನೇ ಮತ್ತು 4ನೇ ಶನಿವಾರ ಹಾಗೂ ಸಾರ್ವಜನಿಕ ರಜಾ ದಿನಗಳಂದು ಸೇವೆ ಲಭ್ಯವಿದೆ.

  • ಬೆಳಗಾವಿ-ಕೊಲ್ಲಾಪುರ : ವೋಲ್ವೋ ಎಸಿ ಬಸ್​ ಬೆಳಿಗ್ಗೆ 8 ಗಂಟೆಗೆ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಿಂದ ಹೊರಡುತ್ತದೆ. ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಹಾಗೂ ಶ್ರೀ ಕ್ಷೇತ್ರ ಕನ್ನೆರಿ ಮಠ ದರ್ಶನ ಮುಗಿಸಿಕೊಂಡು ಸಂಜೆ 7:30ಕ್ಕೆ ಹಿಂದಿರುಗುತ್ತದೆ. ಪ್ರಯಾಣ ದರ 600 ರೂ‌.
  • ಬೆಳಗಾವಿ-ದಾಂಡೇಲಿ : ವೇಗದೂತ ಬಸ್​ ಬೆಳಗ್ಗೆ 7-30ಕ್ಕೆ ಹೊರಡುತ್ತದೆ. ಕಕ್ಕೇರಿ ಬಿಷ್ಟದೇವಿ ದೇವಸ್ಥಾನ, ದಾಂಡೇಲಿ ಮೊಸಳೆ ಪಾರ್ಕ್, ಮೌಳಂಗಿ ಪಾರ್ಕ್, ಕೂಳಗಿ ನೇಚರ್ ಪಾರ್ಕ್ ವೀಕ್ಷಣೆ ಮುಗಿಸಿಕೊಂಡು ಸಂಜೆ 7:45 ಕ್ಕೆ ಹಿಂದಿರುತ್ತದೆ. ಪ್ರಯಾಣ ದರ 360 ರೂ‌.
  • ಬೆಳಗಾವಿ ನಗರ ಪ್ರವಾಸ : ಮಿಡಿ ನಗರ ಸಾರಿಗೆ ಬಸ್ ಬೆಳಗೆ 8:45 ಕ್ಕೆ ಕೇಂದ್ರ ಬಸ್ ನಿಲ್ದಾಣದಿಂದ ಹೊರಡುತ್ತದೆ. ಬೆಳಗಾವಿ ರಾಜಹಂಸಾಗಡ, ಮಿಲಿಟರಿ ಶ್ರೀ ಮಹಾದೇವ ದೇವಸ್ಥಾನ, ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯ ಹಾಗೂ ಹುಚೇವಾರಿ ಮಠ ಶ್ರೀ ರೇವಣಸಿದ್ದೇಶ್ವರ ಮಂದಿರ ವೀಕ್ಷಣೆ ಮುಗಿಸಿಕೊಂಡು ಸಂಜೆ 5-45 ಕ್ಕೆ ಹಿಂದಿರುತ್ತದೆ. ಪ್ರಯಾಣ ದರ 150 ರೂ.
  • ಬೆಳಗಾವಿ ನವಿಲು ತೀರ್ಥ ಡ್ಯಾಮ್ : ವೇಗದೂತ ಬಸ್ ಬೆಳಿಗ್ಗೆ 7-45ಕ್ಕೆ ಹೊರಡುತ್ತದೆ. ಗಂಗಾಂಬಿಕ ಐಕ್ಯ ಸ್ಥಳ, ಎಂ.ಕೆ ಹುಬ್ಬಳ್ಳಿಯ ಶ್ರೀ ಅಶ್ವಥ ಲಕ್ಷ್ಮೀನಾರಾಯಣ ಸ್ವಾಮಿ ದೇವಸ್ಥಾನ, ಕಿತ್ತೂರು ರಾಣಿ ಚೆನ್ನಮ್ಮನ ಕೋಟೆ, ಸೊಗಲ ಶ್ರೀ ಸೋಮೇಶ್ವರ ದೇವಸ್ಥಾನ ಹಾಗೂ ಮುನವಳ್ಳಿ ನವಿಲುತೀರ್ಥ ಡ್ಯಾಮ್ ವೀಕ್ಷಣೆ ಮುಗಿಸಿಕೊಂಡು ಸಂಜೆ 7-15ಕ್ಕೆ ಹಿಂದಿರುಗುತ್ತದೆ. ಪ್ರಯಾಣ ದರ 350 ರೂ.
  • ಬೆಳಗಾವಿ-ಮಹಿಪಾಲಘಡ : ವೇಗದೂತ ಬಸ್ ಬೆಳಿಗ್ಗೆ 7-45ಕ್ಕೆ ಹೊರಡುತ್ತದೆ. ಬೆಳಗಾವಿಯ ರಾಜಹಂಸ ಘಡ, ಬೆಳಗುಂದಿಯ ಶ್ರೀ ಸಿದ್ದೇಶ್ವರ ಸ್ವಾಮಿ ವಿಶ್ರಾಂತ ಆಶ್ರಮ, ರಕ್ಕಸಕೊಪ್ಪ ಡ್ಯಾಮ್, ಧಾಮಣಿ ಫಾಲ್ಸ್/ ನೇಚರ್ ಕ್ಯಾಂಪ್ ಹಾಗೂ ಮಹಿಪಾಲ ಘಡ ಶ್ರೀ ವೈಜನಾಥ ದೇವಸ್ಥಾನ ವೀಕ್ಷಣೆ ಮುಗಿಸಿಕೊಂಡು ಸಂಜೆ 5-30ಕ್ಕೆ ಹಿಂದಿರುತ್ತದೆ. ಪ್ರಯಾಣದರ 200 ರೂ.
  • ಬೆಳಗಾವಿ-ಬದಾಮಿ : ವೇಗದೋತ ಬಸ್ ಬೆಳಗ್ಗೆ 8ಕ್ಕೆ ಹೊರಡುತ್ತದೆ. ಗೋಡಚಿ ಶ್ರೀ ವೀರಭದ್ರೇಶ್ವರ ದೇವಸ್ಥಾನ, ಬದಾಮಿಯ ಮೇಣ ಬಸದಿ, ಗುಹಾಂತರ ದೇವಾಲಯಗಳು, ಬನಶಂಕರಿ ದೇವಸ್ಥಾನ ಹಾಗೂ ಶ್ರೀ ಶಿವಯೋಗ ಮಂದಿರ ವೀಕ್ಷಣೆ ಮುಗಿಸಿಕೊಂಡು ಸಂಜೆ 5 -15ಕ್ಕೆ ಹಿಂದಿರುಗುತ್ತದೆ. ಪ್ರಯಾಣ ದರ 270 ರೂ.
  • ಬೆಳಗಾವಿ-ಕಕ್ಕೇರಿ : ವೇಗದೂತ ಬಸ್ ಬೆಳಗ್ಗೆ 7:45 ಕ್ಕೆ ಹೊರಡುತ್ತದೆ. ಬೆಳಗಾವಿಯ ರಾಜಹಂಸ ಘಡ, ಅಸೋಗಾ ಹೊಳೆದಂಡೆ, ನಂದಗಡ ಸಂಗೊಳ್ಳಿ ರಾಯಣ್ಣನ ಸಮಾಧಿ, ಹಲಸಿ ಭೂ ವರಹಾ ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನ ಹಾಗೂ ಕಕ್ಕೇರಿ ಶ್ರೀ ಬಿಷ್ಟಾದೇವಿ ದೇವಸ್ಥಾನ ವೀಕ್ಷಣೆ ಮುಗಿಸಿಕೊಂಡು ಸಂಜೆ 5 15ಕ್ಕೆ ಹಿಂದಿರುತ್ತದೆ. ಪ್ರಯಾಣ ದರ 230 ರೂ.
  • ಮಾಹಿತಿಗಾಗಿ : ಮೊಬೈಲ್​ ನಂ. 7760991631 /9945536685 ಸಂಪರ್ಕಿಸಬಹುದು.

ಇದನ್ನೂ ಓದಿ : NWKRTC ಹೊಸ ಪ್ರಯೋಗ: ಜಲಪಾತಗಳ ವೀಕ್ಷಣೆಗೆ ವಿಶೇಷ ಬಸ್: ಶಕ್ತಿ ಯೋಜನೆಗಿಲ್ಲ ಅವಕಾಶ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.