ETV Bharat / state

ಅತಿ ವೇಗ ತಂದ ಆಪತ್ತು.. ಕಾರು ಪಲ್ಟಿಯಾಗಿ ಯುವಕ ಸಾವು, ನಾಲ್ವರಿಗೆ ಗಾಯ..

author img

By

Published : Jan 1, 2022, 1:14 PM IST

ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ಇದರಲ್ಲಿ ಯುವಕನೋರ್ವ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಗಾಯಗೊಂಡ ನಾಲ್ವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ರವಾನೆ ಮಾಡಲಾಗಿದೆ..

one-killed-and-four-injured-in-hubballi-car-accident
ಕಾರು ಪಲ್ಟಿ

ಹುಬ್ಬಳ್ಳಿ : ಅತಿ ವೇಗದಿಂದ ಕಾರೊಂದು ಪಲ್ಟಿಯಾಗಿ ಓರ್ವ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ನಗರದ ಹೊರವಲಯದ ರಾಯನಾಳ ಕ್ರಾಸ್ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.

one-killed-and-four-injured-in-hubballi-car-accident
ಕಾರು ಅಪಘಾತ

ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ಇದರಲ್ಲಿ ಯುವಕನೋರ್ವ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಗಾಯಗೊಂಡ ನಾಲ್ವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

one-killed-and-four-injured-in-hubballi-car-accident
ಅಪಘಾತಕ್ಕೀಡಾದ ಕಾರು

ಮೃತ ಯುವಕನನ್ನ ಹುಬ್ಬಳ್ಳಿ ಮಹಾವೀರಗಲ್ಲಿಯ ಗಣೇಶ ಬಂಡಿ ಎಂದು ಗುರುತಿಸಲಾಗಿದೆ. ಕಾರು ಲಕ್ಷ್ಮಿಕಾಂತ ಕಾಟವಾಟೆ ಎನ್ನುವವರ ಹೆಸರಿನಲ್ಲಿದೆ. ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳ ಬಗ್ಗೆ ಹಾಗೂ ಇತರೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಇದನ್ನೂ ಓದಿ: ರಾಯಚೂರು : ಸರ್ಕಾರಿ ಶಾಲೆಯಲ್ಲಿ ಹೊಸ ವರ್ಷದ ಎಣ್ಣೆ ಪಾರ್ಟಿ ಮಾಡಿರುವ ಆರೋಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.