ಬಲಿ ಪಡೆಯಲು ಕಾದು ಕುಳಿತಿವೆ ವಾಣಿಜ್ಯ ನಗರಿ ಗುಂಡಿಗಳು.. ಹುಬ್ಬಳ್ಳಿಯ ಬೈಕ್ ಸವಾರರೇ ಹುಷಾರ್

author img

By

Published : Sep 22, 2022, 7:07 PM IST

Updated : Sep 22, 2022, 7:49 PM IST

potholes of Hubli are waiting to kill

ಈಗಾಗಲೇ ಸಾಕಷ್ಟು ಜನರು ಬಿದ್ದು, ಆಸ್ಪತ್ರೆಗೆ ದಾಖಲಾಗಿದ್ದರೂ ಕೂಡ ಪಾಲಿಕೆಯ ಸಿಬ್ಬಂದಿ ಗುಂಡಿ ಮುಚ್ಚುವ ಕಾರ್ಯಕ್ಕೆ ಮಾತ್ರ ಮುಂದಾಗಿಲ್ಲ. ಈ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿ ಹಾಗೂ ಬೇಕಾಬಿಟ್ಟಿಯಾಗಿ ತೆಗೆದ ಗುಂಡಿಗಳು ಯಾವ ಹೊತ್ತಿನಲ್ಲಿ ಯಾರ ಜೀವ ತೆಗೆದುಕೊಳ್ಳುತ್ತದೆಯೋ ಗೊತ್ತಿಲ್ಲ. ಕೇಶ್ವಾಪೂರದ ಸೇಂಟ್ ಮೇರಿ ಸ್ಕೂಲ್ ಬಳಿಯಲ್ಲಿ ತೆಗೆದಿರುವ ಗುಂಡಿಯೊಂದರಲ್ಲಿ ಬೈಕ್ ಸವಾರನೊಬ್ಬ ಬಿದ್ದಿರುವ ಘಟನೆ ಬುಧವಾರ ರಾತ್ರಿಯ ವೇಳೆಯಲ್ಲಿ ನಡೆದಿದೆ.

ಕಾಮಗಾರಿ ನಡೆಸುವ ಗುತ್ತಿಗೆದಾರರು ಹಾಗೂ ಸಿಬ್ಬಂದಿಗೆ ಸೂಚನಾ ಫಲಕಗಳನ್ನು ಕೂಡ ಹಾಕಿಲ್ಲ. ಹೀಗಾಗಿ ರಸ್ತೆಯಲ್ಲಿರುವ ದೊಡ್ಡ ಗುಂಡಿಯೊಂದರಲ್ಲಿ ಬೈಕ್ ಸವಾರ ಬಿದ್ದಿದ್ದಾನೆ. ಗಾಯಗೊಂಡಿರುವ ವ್ಯಕ್ತಿಯನ್ನು ಸ್ಥಳೀಯರು ಮೇಲೆ ಎತ್ತಿ ಮನೆಗೆ ಕಳುಹಿಸಿದ್ದಾರೆ. ಆದರೆ ಬೈಕ್ ಮೇಲೆ ಎತ್ತಲು ಇನ್ನೂ ಆಗಿಲ್ಲ.

ಬಲಿ ಪಡೆಯಲು ಕಾದು ಕುಳಿತಿವೆ ವಾಣಿಜ್ಯ ನಗರಿ ಗುಂಡಿಗಳು

ಬೇಕಾಬಿಟ್ಟಿಯಾಗಿ ಗುಂಡಿ ತೆಗೆದಿದ್ದು, ಯಾವುದೇ ಬೀದಿ ದೀಪದ ವ್ಯವಸ್ಥೆ ಇಲ್ಲದೇ ಇರುವುದರಿಂದ ಇಂತಹದೊಂದು ಅವಘಡ ಸಂಭವಿಸಿದೆ. ಈಗಾಗಲೇ ಸಾಕಷ್ಟು ಜನರು ಬಿದ್ದು, ಆಸ್ಪತ್ರೆಗೆ ದಾಖಲಾಗಿದ್ದರೂ ಕೂಡ ಪಾಲಿಕೆಯ ಸಿಬ್ಬಂದಿ ಗುಂಡಿ ಮುಚ್ಚುವ ಕಾರ್ಯಕ್ಕೆ ಮಾತ್ರ ಮುಂದಾಗಿಲ್ಲ. ಈ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಾವಿಗೆ ರಹದಾರಿಯಾದ ರಾಷ್ಟ್ರೀಯ ಹೆದ್ದಾರಿ 48: ತುಮಕೂರು ರಸ್ತೆಯಲ್ಲಿ ಸಾವಿರಾರು ಗುಂಡಿಗಳು

Last Updated :Sep 22, 2022, 7:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.