ETV Bharat / state

ಮುಸ್ಲಿಮರ ವೋಟ್ ಪಡೆಯಲು RSS-BJPಯನ್ನ ಬೈಯ್ತಾರೆ, ನಾವು ಮುಸ್ಲಿಂ ವಿರೋಧಿಗಳಲ್ಲ.. ಸಚಿವ ಪ್ರಲ್ಹಾದ್ ಜೋಶಿ

author img

By

Published : Oct 16, 2021, 5:36 PM IST

pralhad joshi reaction on siddaramaiah hdk rss statements
ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಪ್ರತಿಕ್ರಿಯೆ

ಜನಸಂಖ್ಯೆ ನಿಯಂತ್ರಣ ಬಗ್ಗೆ ಮೋಹನ್ ಭಾಗವತ್ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು, ಅವರು ಹೇಳಿರುವ ವಿಚಾರ ಸತ್ಯವಾಗಿದೆ. ಸಂಬಂಧಿಸಿದ ಎಲ್ಲ ಸರ್ಕಾರಗಳು ಗಂಭೀರ ಚಿಂತನೆ ಮಾಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಬಗ್ಗೆ ಚಿಂತನೆ ಮಾಡಬೇಕು ಎಂದು ಹೇಳಿದ್ದಾರೆ..

ಧಾರವಾಡ : ಅಲ್ಪಸಂಖ್ಯಾತರ ಮತ ಪಡೆಯಲು ಆರ್​ಎಸ್​ಎಸ್​​ ಟೀಕೆ ಮಾಡುತ್ತಾರೆ. ನಾವು ಮುಸ್ಲಿಂ ವಿರೋಧಿ ಅಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರ್​ಎಸ್​ಎಸ್​​ ಟೀಕೆ ವಿಚಾರಕ್ಕೆ‌ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಪ್ರತಿಕ್ರಿಯಿಸಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಪ್ರತಿಕ್ರಿಯೆ

ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವ ಸಮುದಾಯದ ವಿರೋಧವಾಗಿಯೂ ನಾವಿಲ್ಲ. ಆದರೆ, ಅವರು ಮುಗ್ಧ ಮುಸ್ಲಿಂರ ವೋಟ್ ಪಡೆಯಲು ಆರ್​ಎಸ್​ಎಸ್-ಬಿಜೆಪಿ ಬೈಯುತ್ತಾರೆ. ಬಿಜೆಪಿ, ಆರ್​ಎಸ್​ಎಸ್​ ಅನ್ನು ಭೂತದಂತೆ ತೋರಿಸುತ್ತಿದ್ದಾರೆ. ಅದಕ್ಕಾಗಿಯೇ ಸಿದ್ದರಾಮಯ್ಯ, ಹೆಚ್‌ಡಿಕೆ ಸ್ಪರ್ಧೆಗೆ ಬಿದ್ದಿದ್ದಾರೆ. ಅವರ ಬೇರೆ ವೋಟ್ ಬ್ಯಾಂಕ್ ಎಲ್ಲ ಕಡಿಮೆ ಆಗುತ್ತಿದೆ ಎಂದರು.

ಇದನ್ನೂ ಓದಿ : ಹಿಂದೂ ದೇವಾಲಯಗಳನ್ನ RSSನವರೇನು ಗುತ್ತಿಗೆ ತೆಗೆದುಕೊಂಡಿದ್ದಾರಾ.. ಮಾಜಿ ಸಿಎಂ ಹೆಚ್​ಡಿಕೆ ಪ್ರಶ್ನೆ

ಜನಸಂಖ್ಯೆ ನಿಯಂತ್ರಣ ಬಗ್ಗೆ ಮೋಹನ್ ಭಾಗವತ್ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು, ಅವರು ಹೇಳಿರುವ ವಿಚಾರ ಸತ್ಯವಾಗಿದೆ. ಸಂಬಂಧಿಸಿದ ಎಲ್ಲ ಸರ್ಕಾರಗಳು ಗಂಭೀರ ಚಿಂತನೆ ಮಾಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಬಗ್ಗೆ ಚಿಂತನೆ ಮಾಡಬೇಕು ಎಂದು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.