ETV Bharat / state

ಚಿತ್ರದುರ್ಗಕ್ಕೆ ತೆರಳಿದ ರಾಹುಲ್ ಗಾಂಧಿ: ಸಿದ್ದರಾಮೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

author img

By

Published : Aug 3, 2022, 10:17 AM IST

rahul-gandhi-traveled-from-hubli-to-chitradurga
ಚಿತ್ರದುರ್ಗಕ್ಕೆ ತೆರಳಿದ ರಾಹುಲ್ ಗಾಂಧಿ: ಸಿದ್ದರಾಮೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಸಿದ್ದರಾಮಯ್ಯ ಅಮೃತ ಮಹೋತ್ಸವ ಮತ್ತು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಹುಬ್ಬಳ್ಳಿಗೆ ಆಗಮಿಸಿದ್ದ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ಚಿತ್ರದುರ್ಗಕ್ಕೆ ಪ್ರಯಾಣ ಬೆಳೆಸಿದ್ದಾರೆ.

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75 ನೇ ವರ್ಷದ ಅಮೃತಮಹೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ನಿನ್ನೆ ರಾತ್ರಿ ಹುಬ್ಬಳ್ಳಿಗೆ ಆಗಮಿಸಿದ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಇಂದು ಚಿತ್ರದುರ್ಗಕ್ಕೆ ಪ್ರಯಾಣ ಬೆಳೆಸಿದ್ದಾರೆ.

ನಗರದ ಖಾಸಗಿ ಹೋಟೆಲ್​​​ನಲ್ಲಿ ಉಪಹಾರ ಸೇವಿಸಿದ ಬಳಿಕ ರಸ್ತೆ ಮಾರ್ಗವಾಗಿ ಚಿತ್ರದುರ್ಗ ಪ್ರಯಾಣ ಬೆಳೆಸಿದ ರಾಹುಲ್ ಗಾಂಧಿ ಜೊತೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ‌.ವೇಣುಗೋಪಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಚಿತ್ರದುರ್ಗಕ್ಕೆ ತೆರಳಿದ್ದಾರೆ.

ರಾಹುಲ್ ಗಾಂಧಿಗೆ ಚರಕ ಗಿಫ್ಟ್: ವಾಣಿಜ್ಯ ನಗರಿಗೆ ಭೇಟಿ ನೀಡಿದ ರಾಹುಲ್ ಗಾಂಧಿಯವರಿಗೆ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಚರಕವನ್ನು ಉಡುಗೊರೆಯಾಗಿ ನೀಡಿದರು. ಚಿತ್ರದುರ್ಗಕ್ಕೆ ತೆರಳುವ ಮುನ್ನ, ಡಿಕೆ ಶಿವಕುಮಾರ ನೇತೃತ್ವದಲ್ಲಿ ಈ ಚರಕ ನೀಡಲಾಯಿತು.

ಓದಿ : ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ಕೆಎಸ್ಆರ್​ಟಿಸಿ ಬಸ್: ಇಂದು ಬಸ್ ಪ್ರಯಾಣಿಕರಿಗೆ ಎದುರಾಗಲಿದೆ ಸಂಕಷ್ಟ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.