ETV Bharat / state

ಮಧ್ಯಾಹ್ನದ ಬಿಸಿಯೂಟ ಸೇವಿಸಿ 36 ಶಾಲಾ ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

author img

By

Published : Mar 28, 2023, 11:01 PM IST

ಧಾರವಾಡದಲ್ಲಿ ಬಿಸಿಯೂಟ ಸೇವಿಸಿದ ಶಾಲಾ ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ.

Have a midday meal admitted to the hospital
ಮಧ್ಯಾಹ್ನದ ಬಿಸಿಯೂಟ ತಿಂದು ಆಸ್ಪತ್ರೆ ದಾಖಲು

ಧಾರವಾಡ : ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 36 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಎಂದಿನಂತೆ ಮಂಗಳವಾರ ಮಧ್ಯಾಹ್ನ ಕೂಡ ಮಕ್ಕಳಿಗೆ ಬಿಸಿಯೂಟ ನೀಡಿದಾಗ ಅನ್ನದಲ್ಲಿ ಹಲ್ಲಿಯಂತ ಹುಳು ಕಂಡು ಬಂದಿವೆ. ಬಳಿಕ ಊಟ ಸೇವಿಸಿದ ಸುಮಾರು 36 ಮಕ್ಕಳಳು ವಾಂತಿ, ವಾಕರಿಕೆ ಮಾಡಿಕೊಂಡ ಪರಿಣಾಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು, ಈ ವಿಷಯ ತಿಳಿದ ತಕ್ಷಣ ಶಲವಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸ್ಥಳಕ್ಕೆ ಆಗಮಿಸಿ ಅಲ್ಲಿಯೇ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ನವಲಗುಂದ ತಾಲೂಕಾ ಆಸ್ಪತ್ರೆಗೆ ದಾಖಲಿಸಲು ಸೂಚಿಸಲಾಗಿತ್ತು. ಅದರಂತೆ ಕ್ರಮ ಕೈಗೊಂಡಿದ್ದಾರೆ. ಇದೀಗ ಎಲ್ಲ ಮಕ್ಕಳು ಗುಣಮುಖರಾಗಿ, ಆರೋಗ್ಯವಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶಶಿ ಪಾಟೀಲ ಅವರು ತಿಳಿಸಿದರು.

ಈ ಕುರಿತು ಮಹಿತಿ ನೀಡಿರುವ ಡಾ.ಶಶಿ ಪಾಟೀಲ್ ಅವರು, ಗುಡಿಸಾಗರ ಪ್ರಾಥಮಿಕ ಶಾಲೆಗೆ ಇಂದು ಮದ್ಯಾಹ್ನದ ಪೂರೈಸಿದ ಊಟದಲ್ಲಿ ಹಲ್ಲಿಯಂತ ಹುಳು ಕಂಡು ಬಂದಿದ್ದರಿಂದ, ಊಟ ಮಾಡಿದ್ದ ಕೆಲವು ಮಕ್ಕಳು ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದಾರೆ. ಕೆಲವು ಮಕ್ಕಳು ಹೆದರಿಕೆಯಿಂದ ವಾಕರಿಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಶಾಲಾ ಮುಖ್ಯಸ್ಥರಿಂದ ಈ ಮಾಹಿತಿ ನನಗೆ ಬಂದ ತಕ್ಷಣ ಶಲವಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶೋಕ ಅಗರವಾಲ್ ಅವರಿಗೆ ತ​ಕ್ಷಣ ಸ್ಥಳಕ್ಕೆ ತೆರಳಿ ಸೂಕ್ತ ಚಿಕಿತ್ಸೆ ನೀಡಲು ಸೂಚಿಸಲಾಗಿತ್ತು.

ಇದನ್ನೂ ಓದಿ : ರಾಜ್ಯ ರಾಜಕಾರಣದಲ್ಲಿ ಆಗಲಿದೆಯಾ ನಾಯಕತ್ವ ಬದಲಾವಣೆ?: ನಿಜವಾಗುತ್ತಾ ಧಾರವಾಡ ಗೊಂಬೆ ಭವಿಷ್ಯ?

ಅದರಂತೆ ಅವರು ಮಕ್ಕಳಿಗೆ ಸ್ಥಳದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಮತ್ತು ಮುಂಜಾಗ್ರತೆಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ನವಲಗುಂದ ತಾಲೂಕಾ ಆಸ್ಪತ್ರೆಗೆ 36 ಮಕ್ಕಳನ್ನು ದಾಖಲಿಸಿದ್ದಾರೆ. ಅವರಿಗೆ ನವಲಗುಂದ ತಾಲೂಕಾ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ವಿದ್ಯಾ ಹಾಗೂ ಡಾ. ಮಹೇಶ ನೇತೃತ್ವದಲ್ಲಿ ಹೊರ ರೋಗಿಗಳಾಗಿ ಚಿಕಿತ್ಸೆ ನೀಡಿದ್ದಾರೆ. ಇದರಿಂದ ಬಹುತೇಕ ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. 6 ಮಕ್ಕಳಿಗೆ ಮಾತ್ರ ವಾಂತಿ ಕಾರಣಕ್ಕಾಗಿ ಸಲೈನ್ ಹಚ್ಚಲಾಗಿತ್ತು. ಅವರು ಸಹ ಸಂಜೆಯೊಳಗೆ ಸಂಪೂರ್ಣ ಚೇತರಿಕೆ ಆಗಿದ್ದಾರೆ. ಯಾವುದೆ ಮಕ್ಕಳಿಗೆ ಅಪಾಯವಿಲ್ಲ ಆದರಿಂದ ಪೋಷಕರು ಗಾಬರಿಯಾಗದಂತೆ ಡಾ.ಶಶಿ ಪಾಟೀಲ ಅವರು ಮನವಿ ಮಾಡಿದರು. ಇನ್ನು ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿ ಪಾಟೀಲ, ಡಿ.ಎಸ್.ಓ ಡಾ.ಸುಜಾತಾ ಹಸವಿಮಠ, ಆರ್‍ಸಿಎಚ್‍ಓ ಡಾ.ಎಸ್.ಎಂ.ಹೊನಕೇರಿ ಅವರು ಸ್ಥಳದಲ್ಲಿದ್ದು, ಮಕ್ಕಳ ಆರೋಗ್ಯ ಚಿಕಿತ್ಸೆ ಬಗ್ಗೆ ನಿಗಾವಹಿಸಿ, ಸೂಕ್ತ ಚಿಕಿತ್ಸೆ ನೀಡಿದ್ದಾರೆ.

ಇದನ್ನೂ ಓದಿ :ಇಬ್ಬರು ಮುಖ್ಯಮಂತ್ರಿಗಳನ್ನು ಕೊಟ್ಟ ಸೆಂಟ್ರಲ್ ಕ್ಷೇತ್ರದಲ್ಲಿ ತುರುಸಿನ ರಾಜಕೀಯ: 6 ಬಾರಿ ಗೆದ್ದ ಶೆಟ್ಟರ್ ಮೇಲೆ ಎಲ್ಲರ ಚಿತ್ತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.