'ಸಿಡಿ ಪ್ರಕರಣ ಕೋರ್ಟ್​​ನಲ್ಲಿದೆ, ಆ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ'... ಹೀಗೆ ಹೇಳಿದ್ಯಾರು?

author img

By

Published : Jun 23, 2021, 3:16 PM IST

Updated : Jun 23, 2021, 3:40 PM IST

Shashikala jolle

ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ಪ್ರತಿಕ್ರಿಯಿಸಲು ಸಚಿವೆ ಶಶಿಕಲಾ ಜೊಲ್ಲೆ ನಿರಾಕರಿಸಿದ್ದು, ಪ್ರಕರಣ ಕೋರ್ಟ್​​ನಲ್ಲಿರುವುದರಿಂದ ಈ ಕುರಿತು ಮಾತನಾಡುವುದಿಲ್ಲ ಎಂದಿದ್ದಾರೆ.

ಧಾರವಾಡ: ಮಾಜಿ ಸಚಿವ ರಮೇಶ​ ಜಾರಕಿಹೊಳಿ ಸಿಡಿ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಸಚಿವೆ ಶಶಿಕಲಾ ಜೊಲ್ಲೆ, ಮಾನವ ಹಕ್ಕು ಆಯೋಗ ಈ ಬಗ್ಗೆ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದೆ. ಸದ್ಯ ಈ ಪ್ರಕರಣ ಕೋರ್ಟ್‌ನಲ್ಲಿರುವುದರಿಂದ ಅದರ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ ಎಂದಿದ್ದಾರೆ.

ಸಿಡಿ ಪ್ರಕರಣ ಕುರಿತು ಶಶಿಕಲಾ ಜೊಲ್ಲೆ ಪ್ರತಿಕ್ರಿಯೆ

ರಾಜ್ಯದಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರಾ, ಜಾರಕಿಹೊಳಿ ಪ್ರಕರಣದಲ್ಲಿ ಯುವತಿಗೆ ಏಕೆ ನ್ಯಾಯ ಸಿಗುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆ ಯುವತಿಯ ಪೋಷಕರನ್ನು ನಾವು ಭೇಟಿ ಮಾಡಿದ್ದೇವೆ. ರಕ್ಷಣೆ ಬೇಕಾದರೆ ನಮ್ಮ ಗಮನಕ್ಕೆ ತನ್ನಿ ಎಂತಲೂ ಹೇಳಿದ್ದೇವೆ. ಮಾನವ ಹಕ್ಕು ಆಯೋಗ ಈ ಬಗ್ಗೆ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದೆ. ಈ ಪ್ರಕರಣ ಕೋರ್ಟ್‌ನಲ್ಲಿರುವುದರಿಂದ ಅದರ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ ಎಂದರು.

ಓದಿ: ಸಂಕಷ್ಟದ ಸಮಯದಲ್ಲೂ ಬಿಜೆಪಿ ಸರ್ಕಾರ ಶಿಕ್ಷಣಕ್ಕೆ ಒತ್ತು ಕೊಟ್ಟಿದೆ : ಸಚಿವ ಕಾರಜೋಳ

Last Updated :Jun 23, 2021, 3:40 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.