ETV Bharat / state

ಬಿಟ್ ಕಾಯಿನ್ ದಂಧೆಯಲ್ಲಿ ಪ್ರಭಾವಿಗಳಿದ್ದಾರೆ, ಸೂಕ್ತ ತನಿಖೆಯಾಗಲಿ: ಸಿದ್ದರಾಮಯ್ಯ ಆಗ್ರಹ

author img

By

Published : Oct 28, 2021, 3:07 PM IST

ಬಿಟ್​ ಕಾಯಿನ್​ ದಂಧೆ ಬಗ್ಗೆ ಸಮಗ್ರ ತನಿಖೆ ನಡೆಯುತ್ತಿದ್ದು, ಭಾಗಿಯಾಗಿರುವ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಇಷ್ಟು ದಿನ ಯಾಕೆ ಪ್ರಕರಣ ಮುಚ್ಚಿಟ್ಟಿದ್ದರು.? ಎಂದು ಪ್ರಶ್ನಿಸಿದ್ದಾರೆ.

Siddaramaiah
ಸಿದ್ದರಾಮಯ್ಯ

ಹುಬ್ಬಳ್ಳಿ: ಬಿಟ್ ಕಾಯಿನ್ ದಂಧೆಯಲ್ಲಿ ಪ್ರಭಾವಿಗಳು ಭಾಗಿಯಾಗಿದ್ದಾರೆ. ಈ ಬಗ್ಗೆ ಸಮಗ್ರವಾದ ತನಿಖೆಯಾಗಬೇಕು ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ. ನಗರದಲ್ಲಿಂದು ಕಾಂಗ್ರೆಸ್ ನಾಯಕನ‌ ಪುತ್ರನ ವಿವಾಹ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಯಾರನ್ನೋ ರಕ್ಷಿಸುವ ಕೆಲಸ ಆಗಬಾರದು, ಈ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದರು.

ಮುಖ್ಯಮಂತ್ರಿಗಳು ಇಡಿಗೆ ರೆಫರ್ ಮಾಡಿದ್ದಾಗಿ ಹೇಳುತ್ತಿದ್ದಾರೆ. ಹಾಗಿದ್ದರೆ ಇಷ್ಟು ದಿನ ಯಾಕೆ ಮುಚ್ಚಿಟ್ಟಿದ್ದರು.? ಇಷ್ಟು ದೊಡ್ಡ ಪ್ರಕರಣವನ್ನು ಮುಚ್ಚಿಟ್ಟಂತೆ ಆಯ್ತಲ್ಲ? ಕೇಂದ್ರ ತನಿಖಾ ಸಂಸ್ಥೆಗಳು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದರು.

ಬಿಟ್ ಕಾಯಿನ್ ದಂಧೆಯಲ್ಲಿ ಪ್ರಭಾವಿಳಿದ್ದಾರೆ..ಸೂಕ್ತ ತನಿಖೆಯಾಗಲಿ: ಸಿದ್ದರಾಮಯ್ಯ ಆಗ್ರಹ

‘ಜಯ ನಮ್ಮದೇ’

ಹಾನಗಲ್​ ಉಪಚುನಾವಣೆಯಲ್ಲಿ ಕಾಂಗ್ರೆಸ್ ನೂರಕ್ಕೆ ನೂರರಷ್ಟು ಗೆಲ್ಲಲಿದೆ. ಹಾನಗಲ್, ಬಂಕಾಪುರ ಶಿರ್ಶಿ ರಸ್ತೆ ಮಾಡಿದ್ದು ನಾವು. ಅಭಿವೃದ್ಧಿ ವಿಚಾರದಲ್ಲಿ ನೇರ ಚರ್ಚೆಗೆ ಬರಲಿ ಎಂದು ಈ ಮೊದಲೇ ಹೇಳಿದ್ದೇನೆ ಎಂದರು.

ಇದನ್ನೂ ಓದಿ: ಬಿಟ್ ಕಾಯಿನ್ ದಂಧೆಯಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.