ETV Bharat / state

ವೀಕ್ಷಕರ ಮುಂದೆಯೇ ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರ ಶಕ್ತಿ ಪ್ರದರ್ಶನ

author img

By

Published : Dec 27, 2022, 10:44 AM IST

Updated : Dec 27, 2022, 12:18 PM IST

supporters of Congress ticket aspirants fight in Hubbali
ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರ ಶಕ್ತಿ ಪ್ರದರ್ಶನ

ಕಾಂಗ್ರೆಸ್​ ಟಿಕೆಟ್​ ಆಕಾಂಕ್ಷಿಗಳ ಬೆಂಬಲಿಗರ ಗಲಾಟೆ - ಬೆಂಬಲಿಗರ ನಡುವೆ ಮಾತಿನ ಜಟಾಪಟಿ - ಪರಿಸ್ಥಿತಿ ತಿಳಿಗೊಳಿಸಿದ ಕಾಂಗ್ರೆಸ್​ ಪಕ್ಷದ ಹಿರಿಯ ಮುಖಂಡರು

ವೀಕ್ಷಕರ ಮುಂದೆಯೇ ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರ ಶಕ್ತಿ ಪ್ರದರ್ಶನ

ಹುಬ್ಬಳ್ಳಿ: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಮಿತಿ ಸಭೆ ಸಂದರ್ಭದಲ್ಲಿ ಪಕ್ಷದ ವೀಕ್ಷಕರ ಮುಂದೆಯೇ ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರು ಶಕ್ತಿ ಪ್ರದರ್ಶನ ಹಾಗೂ ಗಲಾಟೆ ಮಾಡಿದ ಘಟನೆ ನಿನ್ನೆ ಸಂಜೆ ನಗರದ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಜರುಗಿದೆ.

ಕಾಂಗ್ರೆಸ್​ನ ಹಿರಿಯ ಮುಖಂಡರು ಸಂದರ್ಶನ ರೀತಿಯಲ್ಲಿ ಕೆಪಿಸಿಸಿಗೆ ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ್ದ ಆಕಾಂಕ್ಷೆಗಳೊಂದಿಗೆ ಚರ್ಚೆ ನಡೆಸಿದ್ದರು.‌ ಆದರೆ ಅಲ್ಲಿ ಕೆಪಿಸಿಸಿಗೆ ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ್ದ ಆಕಾಂಕ್ಷಿಗಳ ಬೆಂಬಲಿಗರು ಹಾಗೂ ಕಾರ್ಯಕರ್ತರ ದಂಡು ಕೂಡ ಜಮಾವಣೆಗೊಂಡಿತ್ತು.

ಹುಬ್ಬಳ್ಳಿ - ಧಾರಾವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್​ಗಾಗಿ ಮಾಜಿ ಮೇಯರ್ ಅನಿಲ್​ ಕುಮಾರ್ ಪಾಟೀಲ್ ಹಾಗೂ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಬೆಂಬಲಿಗರ ನಡುವೆ ಮಾತಿನ ಜಟಾಪಟಿ ನಡೆದಿದೆ‌. ಈ ಸಂದರ್ಭದಲ್ಲಿ ಆಕಾಂಕ್ಷಿಗಳು ತಮ್ಮ ಹತ್ತಾರು ಬೆಂಬಲಿಗರೊಂದಿಗೆ ಬಂದು ಶಕ್ತಿಪ್ರದರ್ಶನ ಮಾಡಿದ್ದು, ಈ ಸಂದರ್ಭದಲ್ಲಿ ಅನಿಲ್​ ಕುಮಾರ್ ಪಾಟೀಲ್ ಹಾಗೂ ರಜತ್ ಉಳ್ಳಾಗಡ್ಡಿಮಠ ಅವರ ಅಭಿಮಾನಿಗಳು ತಮ್ಮ ನಾಯಕರಿಗೆ ಟಿಕೆಟ್ ನೀಡಬೇಕೆಂದು ಜಯಘೋಷ ಕೂಗಿದರು.

ಹೀಗಾಗಿ ಎರಡು ಗುಂಪುಗಳ ನಡುವೆ ಗಲಾಟೆ ವಿಕೋಪಕ್ಕೆ ತೆರಳಿ ಕಾಂಗ್ರೆಸ್ ಕಚೇರಿಯಲ್ಲಿ ಬಿರುಸಿನ ವಾತಾವರಣ ಸೃಷ್ಟಿಯಾಗಿತ್ತು. ಈ ವೇಳೆ ಪಕ್ಷದ ಹಿರಿಯ ಮುಖಂಡರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಮೂಡಿಗೆರೆಗೆ ಆಗಮಿಸಿದ ಡಿಕೆಶಿ... ಸೇಬಿನ ಹಾರ ಹಾಕಿ ಅದ್ದೂರಿ ಸ್ವಾಗತ

Last Updated :Dec 27, 2022, 12:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.