ETV Bharat / state

ರಾಜ್ಯದಲ್ಲಿ ಕಾಂಗ್ರೆಸ್​ ಬೆಂಬಲಿಸಿದ ಜನರಿಗೆ ಜಗದೀಶ್​ ಶೆಟ್ಟರ್​ ಧನ್ಯವಾದ

author img

By

Published : May 13, 2023, 4:40 PM IST

ಮಾಜಿ ಸಿಎಂ ಜಗದೀಶ್ ಶೆಟ್ಟರ್
ಮಾಜಿ ಸಿಎಂ ಜಗದೀಶ್ ಶೆಟ್ಟರ್

ನಾನು ಸೋತಿದ್ದೇನೆ ಎಂಬ ದುಃಖ ನನಗಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ತಿಳಿಸಿದ್ದಾರೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಗಳಿಸುತ್ತೆ ಅಂದಿದ್ದೆ. ಕಾಂಗ್ರೆಸ್‌ಗೆ ಬೆಂಬಲ ನೀಡಿದ ಕರ್ನಾಟಕ ಜನರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ. ನನಗೆ ಗೆಲ್ಲಲು ಆಗಿಲ್ಲ. ಜನರ ತೀರ್ಪಿಗೆ ಗೌರವ ಕೊಡುತ್ತೇನೆ. ನನ್ನನ್ನು ಸೋಲಿಸಬೇಕು ಅಂತಾ ಹಠ ಮಾಡಿದ್ದವರು ಹಠ ಸಾಧಿಸಿದ್ದಾರೆ ಎಂದು ಮಾಜಿ ಸಿಎಂ‌ ಜಗದೀಶ್ ಶೆಟ್ಟರ್ ಹೇಳಿದರು.

ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನನ್ನನ್ನು ಸೋಲಿಸಲು ಹೋಗಿದ್ದ ವ್ಯಕ್ತಿಗಳು ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಿದ್ದಾರೆ. ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದವರ ವಿರುದ್ಧ ಚಾಲೆಂಜ್ ಮಾಡಿ ಫೇಸ್ ಮಾಡಿದ್ದೇನೆ ಎಂದರು.

ಇದನ್ನೂ ಓದಿ: ಪ್ರಿಯಾಂಕ್ ಖರ್ಗೆಗೆ ಹ್ಯಾಟ್ರಿಕ್ ಗೆಲುವು: ಮಣಿಕಂಠ ರಾಠೋಡ್​ ವಿರುದ್ಧ 13,638 ಮತಗಳ ಅಂತರದ ಜಯ

ಮುಂದೆ ಏನಾಗುತ್ತೆ ನೋಡೋಣ: ನಾನು ಸೋತಿದ್ದೇನೆ ಅನ್ನುವ ದುಃಖ ನನಗಿಲ್ಲ. ಲಿಂಗಾಯತ ಸಮುದಾಯ ಕಡೆಗಣಿಸಿದ್ರು ಅನ್ನೋದರ ಪರಿಣಾಮ ಈಗ ಕಿತ್ತೂರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಣಿಸುತ್ತಿದೆ. ಒಬ್ಬರಿಗೆ ಪೆಟ್ಟು ಕೊಡಲು ಹೋಗಿ ಇಡೀ ಬಿಜೆಪಿಗೆ ಪೆಟ್ಟು ಕೊಟ್ಟಿದ್ದಾರೆ. ರಾಜಕೀಯದಲ್ಲಿ ಕ್ರಿಯಾಶೀಲವಾಗಿದ್ದು, ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತೇನೆ. 70 ವರ್ಷವಾದ ಮೇಲೆ ನಾನು ಚುನಾವಣಾ ರಾಜಕೀಯದಲ್ಲಿ ಇರಲ್ಲ. ನನಗೀಗ 67 ವರ್ಷ. ಮುಂದೆ ಏನಾಗುತ್ತೆ ನೋಡೋಣ. ಬಿಜೆಪಿ ದಕ್ಷಿಣ ಭಾರತದಲ್ಲಿ ಹೇಗೆ ಅವಸಾನ ಆಗುತ್ತಿದೆ ಅಂತಾ ಗೊತ್ತಾಗುತ್ತಿದೆ. ನಾನೇ ಬೆಳೆಸಿದ್ದ ಬಿಜೆಪಿ ಮೈಂಡ್‌ಸೆಟ್ ಚೇಂಜ್​ ಮಾಡಲು ಆಗಿಲ್ಲ ಎಂದರು.

ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಇದು ಮೆಟ್ಟಿಲು, ರಾಹುಲ್ ಗಾಂಧಿ ಪ್ರಧಾನಿ ಆಗಲಿ: ಸಿದ್ದರಾಮಯ್ಯ

ಲಿಂಗಾಯತರು ಕಾಂಗ್ರೆಸ್ ಪರ ನಿಂತಿದ್ದು ಗೆಲುವಿಗೆ ಕಾರಣ: ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ನಮ್ಮ ಒಳಹೊಡೆತ ಕೆಲಸ ಆಗಿಲ್ಲ. ಏನಾಯ್ತು ಅಂತಾ ಬೂತ್​ವೈಸ್​ ಪರಿಶೀಲನೆ ಮಾಡುತ್ತೇನೆ. ಕೆಲವೇ ವ್ಯಕ್ತಿಗಳ ಕುತಂತ್ರದಿಂದ ಇದೆಲ್ಲಾ ಆಗುತ್ತಿದೆ. ಮುಂದೆ ಲೋಕಸಭಾ ಚುನಾವಣೆ ಬರುತ್ತಿದೆ. ಇದರ ಪರಿಣಾಮ ದೇಶಾದ್ಯಂತ ಆಗುತ್ತೆ. ಲಿಂಗಾಯತ ಬೆಲ್ಟ್ ಮೇಲೆ ಇಂಪ್ಯಾಕ್ಟ್ ಆಗಿದ್ದು, ಲಿಂಗಾಯತರು ಕಾಂಗ್ರೆಸ್ ಪರ ನಿಂತಿದ್ದು, ಗೆಲುವಿಗೆ ಒಂದು ಕಾರಣ ಎಂದು ಶೆಟ್ಟರ್​ ಹೇಳಿದ್ದಾರೆ.

ಇದನ್ನೂ ಓದಿ: ಪಕ್ಷದ ಹಿನ್ನಡೆ ಬಗ್ಗೆ ನಾವು ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ: ಬಿ ಎಸ್ ಯಡಿಯೂರಪ್ಪ

ನಾನೆಂದೂ ಸೇಡಿನ ರಾಜಕೀಯ ಮಾಡಿಲ್ಲ: ಹುಬ್ಬಳ್ಳಿಯಲ್ಲಿ ಬಿಜೆಪಿ ಒತ್ತಡ ತಂತ್ರ ಮತ್ತು ಭಯದ ವಾತಾವರಣ ಹೇರಿದ್ದರು. ಹಣ ಹಂಚಿ ಚುನಾವಣೆಯಲ್ಲಿ ಗೆದ್ದಿದ್ದಾರೆ‌. ಅಧಿಕಾರದ ದುರುಪಯೋಗ, ದೌರ್ಜನ್ಯವಾಗಿದೆ. ಮೋದಿ ನಾಯಕತ್ವ, ಬಿಜೆಪಿ ಸರ್ಕಾರವಿದ್ದಾಗಲೂ 65ಕ್ಕೆ ಬಂದು ನಿಂತಿದ್ದಾರೆ. ನಾನೆಂದೂ ಸೇಡಿನ ರಾಜಕೀಯ ಮಾಡಿಲ್ಲ. ಬಿಜೆಪಿಯ ಅಹಂಕಾರ, ಹಣದ ಮದಕ್ಕೆ ಉತ್ತರ ಕೊಟ್ಟಿದ್ದೇನೆ. ನನಗೆ ಲಾಭವಾಗಿಲ್ಲ, ಆದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ. ಲೋಕಸಭಾ ಚುನಾವಣೆಯ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರ ಜೊತೆ ಕುಳಿತು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಜಗದೀಶ್​ ಶೆಟ್ಟರ್​ ತಿಳಿಸಿದ್ರು.

ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಇದು ಮೆಟ್ಟಿಲು, ರಾಹುಲ್ ಗಾಂಧಿ ಪ್ರಧಾನಿ ಆಗಲಿ: ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.