ETV Bharat / state

ಮತದಾರರ ’’ಒಲವು - ವಿಶ್ವಾಸ ’’ಬಿಜೆಪಿ ಮೇಲಿದೆ : ಡಿಸಿಎಂ ಅಶ್ವತ್ಥ​​ ನಾರಾಯಣ

author img

By

Published : Oct 24, 2020, 2:48 PM IST

DCM Ashwath narayan
ಡಿಸಿಎಂ ಅಶ್ವತ್ಥ್​​ ನಾರಾಯಣ್.

ನಮ್ಮ ಪಕ್ಷಕ್ಕೆ ಯಾರೇ ಸೇರ್ಪಗೊಂಡರೂ ಅವರಿಗೆ ಮುಕ್ತವಾದ ಸ್ವಾಗತವಿದೆ ಎಂದು ಡಿಸಿಎಂ ಅಶ್ವತ್ಥ​ ನಾರಾಯಣ​ ತಿಳಿಸಿದ್ದಾರೆ.

ಧಾರವಾಡ: ರಾಜ್ಯ ಹಾಗೂ ದೇಶದಲ್ಲಿ ಬಿಜೆಪಿ ಸರ್ಕಾರ ಜನಪರವಾಗಿದೆ. ಮತದಾರರ ಒಲವು ಹಾಗೂ ವಿಶ್ವಾಸ ಬಿಜೆಪಿ ಮೇಲಿದೆ ಎಂದು ಡಿಸಿಎಂ ಅಶ್ವತ್ಥ​​ ನಾರಾಯಣ​ ಹೇಳಿದ್ದಾರೆ.

ಡಿಸಿಎಂ ಅಶ್ವತ್ಥ್​​ ನಾರಾಯಣ್​ ಮಾತನಾಡಿದರು

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸುವುದು ಖಚಿತ. ನಮ್ಮ ಪಕ್ಷಕ್ಕೆ ಯಾರೇ ಸೇರ್ಪಡೆಗೊಂಡರೂ ಅವರಿಗೆ ಮುಕ್ತವಾದ ಸ್ವಾಗತವಿದೆ. ಈ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

ಸಿಎಂ ಬದಲಾವಣೆ ವಿಚಾರವಾಗಿ ಶಾಸಕ ಯತ್ನಾಳ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪಕ್ಷದಲ್ಲಿ ಯಾರೇ ಆಗಲಿ ಇಂತಹ ಹೇಳಿಕೆಗಳನ್ನ ಕೊಡಬಾರದು. ಬಹಿರಂಗವಾಗಿ ಈ ವಿಚಾರದ ಬಗ್ಗೆ ಮಾತನಾಡಲ್ಲ. ಈ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರು ಯತ್ನಾಳ್ ಅವರ ಸಂಪರ್ಕದಲ್ಲಿದ್ದಾರೆ. ಈ ವಿಚಾರದ ಬಗ್ಗೆ ಪಕ್ಷದ ನಾಯಕರು ಶಿಸ್ತಿನ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ಮುಂದಿನ ಸಿಎಂ ಡಿಕೆಶಿ ಅಥವಾ ಸಿದ್ಧರಾಮಯ್ಯ ಎಂಬ ಕಾಂಗ್ರೆಸ್ ನವರ ಹೇಳಿಕೆ ವಿಚಾರ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್​ನಲ್ಲಿ ಗುಂಪುಗಳು ಹಲವಾರು ಇವೆ. ಅವರ ಪಕ್ಷದಲ್ಲಿ ಒಗ್ಗಟ್ಟಿಲ್ಲ ಅನ್ನೋದು ಸ್ಪಷ್ಟವಾಗಿ ಗೋಚರಿಸುತ್ತೆ. ಈಗ ಇಬ್ಬರ ಹೆಸರು ಹೇಳಿದ್ದಾರೆ, ಇನ್ನೂ ಹಲವರ ಹೆಸರು ಹೇಳ್ತಾರೆ. ನಮ್ಮ ಪಕ್ಷದಲ್ಲಿ ಯಾವುದೇ ಒಡಕು ಇಲ್ಲ. ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.