ಹುಬ್ಬಳ್ಳಿ: ಹಾಡಹಗಲೇ ಮೈದುನನೇ ಅತ್ತಿಗೆಯನ್ನು ಕುಡುಗೋಲಿನಿಂದ ಕಡಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮದಲ್ಲಿ ಗುರುವಾರ ನಡೆದಿದೆ. ಮನೆಯಲ್ಲಿನ ಆಂತರಿಕ ಕಲಹ ಅತಿರೇಕಕ್ಕೆ ಹೋಗಿ ಕೊಲೆ ನಡೆದಿದೆ ಎಂದು ತಿಳಿದುಬಂದಿದೆ.
ಅತ್ತಿಗೆ ಕೊಂದ ಮೈದುನ: ಯರಿನಾರಾಯಣಪುರ ಗ್ರಾಮದ ಸುನಂದಾ ಮೆಣಸಿನಕಾಯಿ (40) ಕೊಲೆಯಾದ ಮಹಿಳೆ. ಮಂಜುನಾಥ ಕೊಲೆ ಮಾಡಿದ ಆರೋಪಿ. ಘಟನೆಗೆ ಅನೈತಿಕ ಸಂಬಂಧವೂ ಕಾರಣ ಎನ್ನಲಾಗುತ್ತಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕುಂದಗೋಳ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.
(ಇದನ್ನೂ ಓದಿ: ಬೆಳೆ ವಿಮೆ ಪ್ರಿಮಿಯಂ ಹಣ ವರ್ಗಾಯಿಸದ ಬ್ಯಾಂಕ್ಗೆ 50 ಸಾವಿರ ರೂ ದಂಡ)