ETV Bharat / state

ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

author img

By

Published : Jan 6, 2021, 12:39 PM IST

yogesh gowda murder case
ಯೋಗೇಶ್​ ಗೌಡ ಕೊಲೆ ಕೇಸ್‌

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ​ ಯೋಗೇಶ್ ಗೌಡ ಕೊಲೆ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಮುಂದೂಡಿದೆ.

ಧಾರವಾಡ: ಜಿಲ್ಲಾ ಪಂಚಾಯತ್​​ ಸದಸ್ಯ ಯೋಗೇಶ್ ಗೌಡ ಕೊಲೆ ಕೇಸ್​​ನ ಆರೋಪಿಯಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಧಾರವಾಡ ಹೈಕೋರ್ಟ್‌ ಮುಂದೂಡಿಕೆ ಮಾಡಿದೆ.

ಸಿಬಿಐ ಪರ ವಕೀಲರಿಂದ ತಕರಾರು ಸಲ್ಲಿಕೆ ಆಗದ ಹಿನ್ನೆಲೆ ವಿಚಾರಣೆ ಮುಂದೂಡಲಾಗಿದೆ. ಸಿಬಿಐ ಅಧಿಕಾರಿಗಳು ಸಂಜೆ ವೇಳೆ ತಕರಾರು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಕಳೆದ ಎರಡು ತಿಂಗಳಿನಿಂದ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ:ಪೆಟ್ರೋಲ್ ರೇಟ್ ಮತ್ತೆ ಜಂಪ್: ನಿದ್ದೆಗೆಡಿಸುವ ಮಟ್ಟಕ್ಕೆ ತಲುಪಲು ಒಂದೇ ಹೆಜ್ಜೆ ಬಾಕಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.